HomeKarnataka Newsಮುಸ್ಲಿಮರಿಗೆ ಮೀಸಲಾತಿ ಕೊಟ್ಟಿದ್ದು ವೀರಪ್ಪ ಮೊಯ್ಲಿ, ಹೆಚ್.ಡಿ.ದೇವೇಗೌಡರಲ್ಲ: ಜಮೀರ್ ಕೌಂಟರ್!

ಮುಸ್ಲಿಮರಿಗೆ ಮೀಸಲಾತಿ ಕೊಟ್ಟಿದ್ದು ವೀರಪ್ಪ ಮೊಯ್ಲಿ, ಹೆಚ್.ಡಿ.ದೇವೇಗೌಡರಲ್ಲ: ಜಮೀರ್ ಕೌಂಟರ್!

For Dai;y Updates Join Our whatsapp Group

Spread the love

ರಾಮನಗರ:- ಜೆಡಿಎಸ್ ನಾಯಕರ ವಿರುದ್ಧ ವಸತಿ ಸಚಿವ ಜಮೀರ್ ಅಹಮ್ಮದ್ ಅವರು ಆಕ್ರೋಶ ಹೊರ ಹಾಕಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ಮುಸ್ಲಿಮರಿಗೆ ಮೀಸಲಾತಿ ಕೊಟ್ಟಿದ್ದು ಹೆಚ್.ಡಿ.ದೇವೇಗೌಡರಲ್ಲ. ಅವರು ಜನರನ್ನು ದಾರಿ ತಪ್ಪಿಸುವುದು ಬೇಡ ಎಂದು ಸಚಿವ ಜಮೀರ್ ಅಹ್ಮದ್ ವಾಗ್ದಾಳಿ ನಡೆಸಿದ್ದಾರೆ.

ದೇವೇಗೌಡರಿಗೆ ಮನವಿ ಮಾಡ್ತೇನೆ. ಜನರನ್ನು ದಾರಿತಪ್ಪಿಸೋದು ಬೇಡ. 1994 ರಲ್ಲಿ ವೀರಪ್ಪ ಮೊಯ್ಲಿ ಕೊಟ್ಟಿದ್ದು. ಹಿಂದುಳಿದ ವರ್ಗಗಳ ಆಯೋಗಕ್ಕೆ ಮೀಸಲಾತಿ ಕುರಿತು ವರದಿ ಕಳುಹಿಸಿದ್ರು.

ಆಗ ಸರ್ಕಾರ ಹೋಯ್ತು. ಸರ್ಕಾರ ಹೋದ ಮೇಲೆ ದೇವೇಗೌಡರು ಬಂದ್ರು. ವೀರಪ್ಪ ಮೊಯ್ಲಿ 6% ಗೆ ರೆಕ್ಮೆಂಡ್ ಮಾಡಿದ್ದರು. ಆದ್ರೆ ದೇವೇಗೌಡರು ಕೊಟ್ಟಿದ್ದು ಕೇವಲ ೪%. ನಮಗೆ ದೇವೇಗೌಡರು ಮೋಸ ಮಾಡಿದ್ದಾರೆ. 6% ಮೀಸಲಾತಿ ಕೊಟ್ಟಿದ್ದು ಕಾಂಗ್ರೆಸ್ ಪಕ್ಷ ತಿಳಿಸಿದ್ದಾರೆ.

ಜನರ ಜೋಶ್ ನೋಡಿದ್ದೇನೆ. ನಾನು ಕೂಡ ಇದನ್ನ ನಿರೀಕ್ಷೆ ಇಟ್ಟಿರಲಿಲ್ಲ. 25ರಿಂದ 30 ಸಾವಿರ ಮತಗಳ ಅಂತರದಿಂದ ನಮ್ಮ ಅಭ್ಯರ್ಥಿ ಗೆಲ್ತಾರೆ ಅನ್ನೊ ವಿಶ್ವಾಸ ಇದೆ. ನಿಖಿಲ್ ಎನ್‌ಡಿಎ ಅಭ್ಯರ್ಥಿ, ಕುಮಾರಸ್ವಾಮಿಗೆ ಮುಸ್ಲಿಂ ವೋಟ್ ಬೇಕಿಲ್ಲ. ಅಲ್ಪಸಂಖ್ಯಾತರ ವೋಟ್ ಬೇಕಿಲ್ಲ ಅಂತಾ ಅವರು ಮಾತಾಡಿರೋ ವೀಡಿಯೋ ಇದೆ.

ಯಾವ ಮುಖ ಇಟ್ಕೊಂಡು ಮುಸಲ್ಮಾನರ ವೋಟ್ ಕೇಳ್ತಾರೆ? ಯತ್ನಾಳ್ ಹೇಳ್ತಾರೆ ಮುಸಲ್ಮಾನರು, ಗಡ್ಡ ಬಿಟ್ಟವರು, ಟೋಪಿ ಹಾಕಿದವ್ರು ನಮ್ಮ ಹತ್ತಿರ ಬರೋದು ಬೇಡ ಅಂತಾ. ಅವರನ್ನ ಒಪ್ಪಿಸೋಕೆ ಹೇಳಿ ಬಿಜೆಪಿ ಅವ್ರು ಮುಸಲ್ಮಾನರ ಪರವಾಗಿದ್ದೆವು ಅಂತಾ ಒಪ್ಪಿಸಲು ಹೇಳಿ. ಆಗ ಮುಸಲ್ಮಾನರು ಅವರ ಪಕ್ಷಕ್ಕೆ ವೋಟ್ ಹಾಕಲು ಚಿಂತನೆ ಮಾಡ್ತಾರೆ ಎಂದು ಟಾಂಗ್ ಕೊಟ್ಟಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!