ರಸ್ತೆ ದಾಟುವಾಗ ಕಾರು ಡಿಕ್ಕಿ: ಕಾರ್ಮಿಕ ಸ್ಥಳದಲ್ಲೇ ದುರ್ಮರಣ!

0
Spread the love

ಗದಗ:- ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದು ಕಾರ್ಮಿಕ ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 67 ರಲ್ಲಿ ಜರುಗಿದೆ.

Advertisement

25 ವರ್ಷದ ಕಲ್ಲಪ್ಪ ಮೃತ ಕಾರ್ಮಿಕ. ಮೆಕ್ಕೆಜೋಳದ ರಾಶಿ ಮಾಡಲು ಕೂಲಿಗೆ ಬಂದಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಲಕ್ಕುಂಡಿ ಗ್ರಾಮದ ಬಳಿಯ ಹೈವೇಯಲ್ಲಿ ರೈತರು ಮೆಕ್ಕೆಜೋಳ ರಾಶಿ ಮಾಡುತ್ತಿದ್ದರು. ಈ ವೇಳೆ ಕಾರ್ಮಿಕ ಕಲ್ಲಪ್ಪ ಕೂಡ ಕೂಲಿ ಕೆಲಸಕ್ಕೆ ಬಂದಿದ್ದ. ಈ ಸಂದರ್ಭದಲ್ಲಿ ಗದಗದಿಂದ ಕೊಪ್ಪಳ ಕಡೆಗೆ ಹೋಗುವ ಕಾರು ಕಾರ್ಮಿಕನಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಗದಗ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಘಟನೆಯಿಂದ ಮೃತನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.


Spread the love

LEAVE A REPLY

Please enter your comment!
Please enter your name here