ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಸತೀಶ್ ಸೈಲ್ ಸೇರಿ ಮೂರು ಮಂದಿಯ ಶಿಕ್ಷೆ ಅಮಾನತುಗೊಳಿಸಿ ಮಹತ್ವದ ಆದೇಶ ನೀಡಿದೆ. ಹೌದು ಸಿಬಿಐ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್,
ಆರೋಪಿಗಳಿಗೆ ಒಟ್ಟುನ ಆರು ಪ್ರಕರಣಗಳಲ್ಲಿ ಶಿಕ್ಷೆ ಹಾಗೂ ದಂಡ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಆರೋಪಿಗಳ ಪರ ವಕೀಲರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಜನ ಪ್ರತಿನಿಧಿ ಕೋರ್ಟ್ ನೀಡಿದ್ದ ಶಿಕ್ಷೆಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.
6 ವಾರದಲ್ಲಿ ದಂಡದ ಮೊತ್ತದಲ್ಲಿ ಶೇ.25ರಷ್ಟು ಠೇವಣಿ ಕೋರ್ಟ್ನಲ್ಲಿ ಇಡುವಂತೆ ಅಪರಾಧಿಗಳಿಗೆ ಸೂಚಿಸಿ ಶಿಕ್ಷೆ ಅಮಾನತಿನಲ್ಲಿಟ್ಟು ಆದೇಶಿಸಿದೆ, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಸೇರಿದಂತೆ ಇತರೆ ಅಪರಾಧಿಗಳು ನಾಳೆಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.