ಒಳ್ಳೆಯ ಕೆಲಸಗಳಿಗೆ ಪ್ರಧಾನಿ ಮೋದಿ ಬೇಡ ಎನ್ನುವುದಿಲ್ಲ: ಸಚಿವ ವಿ.ಸೋಮಣ್ಣ

0
Spread the love

ಬೆಂಗಳೂರು: ಒಳ್ಳೆಯ ಕೆಲಸಗಳಿಗೆ ಪ್ರಧಾನಿ ಮೋದಿ ಬೇಡ ಎನ್ನುವುದಿಲ್ಲ ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ರೈಲು ನಿಲ್ದಾಣ ಅಭಿವೃದ್ಧಿ ಬಗ್ಗೆ ರೈಲ್ವೆ ಮಂಡಳಿ ಕೆಲ ಸ್ಪಷ್ಟನೆ ಕೇಳಿದೆ. ಮುಂದಿನ ದಿನಗಳಲ್ಲಿ ರೈಲ್ವೆ ಮಂಡಳಿ ಮುಂದೆ ಇಡುತ್ತೇವೆ. ಒಳ್ಳೆಯ ಕೆಲಸಗಳಿಗೆ ಪ್ರಧಾನಿ ನರೇಂದ್ರ ಮೋದಿ ಬೇಡ ಎನ್ನುವುದಿಲ್ಲ.

Advertisement

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಜೊತೆ ಚರ್ಚಿಸಿ ಕೆಲಸ ಆರಂಭಿಸುತ್ತೇವೆ ಎಂದು ತಿಳಿಸಿದ್ದಾರೆ. ಸುಮಾರು 1500 ಕೋಟಿ ರೂ. ವೆಚ್ಚದಲ್ಲಿ ಏರ್​ಪೋರ್ಟ್​ಗಿಂತ ವಿಭಿನ್ನವಾಗಿ ಮೆಜೆಸ್ಟಿಕ್​​ ರೈಲು ನಿಲ್ದಾಣ ಅಭಿವೃದ್ಧಿ ಮಾಡುತ್ತೇವೆ. ಏರ್​ಪೋರ್ಟ್​ನಲ್ಲಿ ಸಿಗುವ ಎಲ್ಲಾ ಸವಲತ್ತುಗಳು ಸಿಗಲಿದೆ. 160 ಎಕರೆ ಜಾಗ ಇದೆ. ನಿರೋದ್ಯೋಗಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here