ಸುಖ ಶಾಂತಿ ಜೀವನ ಪ್ರಾಪ್ತವಾಗಲು ಧರ್ಮಾಚರಣೆ ಮಾಡಬೇಕು: ರಂಭಾಪರಿ ಶ್ರೀ

0
Spread the love

ವಿಜಯಸಾಕ್ಷಿ ಸುದ್ದಿ, ಬಸವಾಪಟ್ಟಣ: ಮನುಷ್ಯ ಯಾವಾಗಲೂ ಸುಖಾಪೇಕ್ಷಿ. ಸುಖ ಶಾಂತಿ ಜೀವನ ಪ್ರಾಪ್ತವಾಗಲು ಮೊದಲು ಧರ್ಮಾಚರಣೆಯನ್ನು ಮಾಡಬೇಕಾಗುತ್ತದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

Advertisement

ಅವರು ಗುರುವಾರ ತೊಟ್ಟಿಮನೆ ವಂಶಸ್ಥರು ನಿರ್ಮಿಸಿದ ಶ್ರೀ ಗಂಗಾಧರೇಶ್ವರಸ್ವಾಮಿ ನೂತನ ದೇವಾಲಯ ಉದ್ಘಾಟಿಸಿ ಪ್ರಾಣಪ್ರತಿಷ್ಠಾಪನೆ ನೆರವೇರಿಸಿ, ನಂತರ ಜರುಗಿದ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.

ಬಾಳ ಬದುಕಿಗೆ ಧರ್ಮದ ಬೆಳಕು ಬೇಕು. ಬೆಳಕಿಲ್ಲದ ಬಾಳಿಗೆ ಬೆಲೆ ನೆಲೆಯಿಲ್ಲ. ಬೆಳಕಿದ್ದರೆ ಯಾವುದರ ಭಯವೂ ಮನುಷ್ಯನಿಗೆ ಇರುವುದಿಲ್ಲ. ಇಹ ಪರ ಜೀವನದ ಶ್ರೇಯಸ್ಸಿಗೆ ಧರ್ಮವೇ ಮೂಲವೆಂದು ಶ್ರೀ ಜಗದ್ಗುರು ರೇಣುಕಾಚಾರ್ಯರು ನಿರೂಪಿಸಿದ್ದಾರೆ. ಅಹಿಂಸಾದಿ ಧ್ಯಾನ ಪರ್ಯಂತರವಾದ ದಶಧರ್ಮ ಸೂತ್ರಗಳು ಬದುಕಿ ಬಾಳುವ ಜನಾಂಗಕ್ಕೆ ದಾರಿ ದೀಪ. ಅರಿವಿನ ದಾರಿಯಲ್ಲಿ ಮುನ್ನಡೆಸುವುದೇ ಗುರುವಿನ ಪರಮ ಧರ್ಮವಾಗಿದೆ. ಒಂದು ನಿಶ್ಚಿತ ಗುರಿ ಮತ್ತು ಒಬ್ಬ ಶ್ರೇಷ್ಠ ಗುರುವಿನ ಸಹಯೋಗದಿಂದ ಬದುಕು ಉಜ್ವಲಗೊಳ್ಳುತ್ತದೆ. ಸುಖ ಬಯಸುವ ಮನುಷ್ಯ ಧರ್ಮಾಚರಣೆ ಮಾಡಲು ಹಿಂಜರಿಯುತ್ತಾನೆ. ರ್ದುಖವನ್ನು ಯಾರೂ ಬಯಸುವುದಿಲ್ಲ. ಆದರೆ ಧರ್ಮ ಪರಿಪಾಲನೆ ಮಾಡಲಾರ. ಸತ್ಯ ಶುದ್ಧ ಸೈದ್ಧಾಂತಿಕ ತಳಹದಿಯ ಮೇಲೆ ಮಾನವ ಜೀವನ ರೂಪಿತಗೊಳ್ಳಬೇಕಾಗಿದೆ ಎಂದರು.

ಕರ್ಪುರವಳ್ಳಿ ಚಂದ್ರಶೇಖರ ಶಿವಾಚಾರ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಬಿ.ಸಿ. ನಂಜುAಡಶೆಟ್ಟಿ, ಬಿ.ಎಸ್. ಮಹದೇವಪ್ಪ, ಬಿ.ಜಿ. ಕರುಣೇಶ್, ಬಿ.ಜಿ. ಶ್ರೀಕಂಠಶೆಟ್ಟಿ, ಬಿ.ಜಿ. ಷಡಕ್ಷರಶೆಟ್ಟರ ಹಾಗೂ ಬಿ.ಜಿ. ದೊಡ್ಡೇಶ ಬಾಬು ಮೊದಲಾದವರು ಉಪಸ್ಥಿತರಿದ್ದು ಶ್ರೀ ರಂಭಾಪುರಿ ಜಗದ್ಗುರುಗಳ ಆಶೀರ್ವಾದ ಪಡೆದರು. ತೊಟ್ಟಿಮನೆ ಮಹದೇವಪ್ಪನವರು ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.


Spread the love

LEAVE A REPLY

Please enter your comment!
Please enter your name here