ದೆಹಲಿಗೆ ಬಂದು ಚಾಡಿ ಹೇಳುವ ಕೆಲಸವನ್ನು ನಾನು ಮಾಡುವುದಿಲ್ಲ: ಬಿವೈ ವಿಜಯೇಂದ್ರ

0
Spread the love

ನವದೆಹಲಿ: ದೆಹಲಿಗೆ ಬಂದು ಚಾಡಿ ಹೇಳುವ ಕೆಲಸವನ್ನು ನಾನು ಮಾಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ದೇವಾಲಯಗಳಿಗೂ ವಕ್ಫ್ ನೋಟಿಸ್ ನೀಡಿದ್ದಾರೆ. ವಕ್ಫ್​ ವಿರುದ್ಧ ಮೂರು ತಂಡ ಮಾಡಿ ಅಹವಾಲು ಸ್ವೀಕರಿಸುತ್ತಿದ್ದೇವೆ.

Advertisement

ಹೈಕಮಾಂಡ್ ನಾಯಕರು ನನಗೆ ಜವಾಬ್ದಾರಿಯನ್ನು ಕೊಟ್ಟಿದ್ದಾರೆ. ದೆಹಲಿಗೆ ಬಂದು ಚಾಡಿ ಹೇಳುವ ಕೆಲಸವನ್ನು ನಾನು ಮಾಡುವುದಿಲ್ಲ. ಪಕ್ಷದ ಅಧ್ಯಕ್ಷನಾಗಿ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತಿದ್ದೇನೆ. ನನ್ನ ವಿರುದ್ಧ ದೂರು ನೀಡುವವರನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದರು.

ಇನ್ನೂ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಈಗಾಗಲೇ ಸೋಲೊಪ್ಪಿಕೊಳ್ಳುವ ಮಾತುಗಳನ್ನಾಡಿದ್ದಾರೆ. ಶಿಗ್ಗಾಂವಿಯಲ್ಲಿ ಹೆಚ್ಚು ಮತಗಳ ಅಂತರದಲ್ಲಿ ಭರತ್ ಗೆಲ್ಲುತ್ತಾರೆ. ಸಂಡೂರಿನಲ್ಲೂ ಬಿಜೆಪಿ ಗೆಲ್ಲಲಿದೆ ಎಂದು ವಿಜಯೇಂದ್ರ ಹೇಳಿದರು.


Spread the love

LEAVE A REPLY

Please enter your comment!
Please enter your name here