ಬೀದರ್: ಲೇಔಟ್ ವಿನ್ಯಾಸ ಪೂರ್ಣ ರಿಲೀಸ್ ಮಾಡಲು 50 ಲಕ್ಷ ಲಂಚಕ್ಕೆ ಬೇಡಿಕೆಯನ್ಬಿಟ್ಟಿದ್ದ ಬುಡಾ ಆಯುಕ್ತರು ಹಾಗೂ ಸದಸ್ಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬುಡಾ ಆಯುಕ್ತ ಶ್ರೀಕಾಂತ್ ಚಿಮಕೋಡೆ ಹಾಗೂ ಬುಡಾ ಸದಸ್ಯ ಚಂದ್ರಕಾಂತ್ ರೆಡ್ಡಿ ಲೋಕಾಯುಕ್ತ ಬಲೆಗೆ ಬಿದ್ದವರಾಗಿದ್ದು,
Advertisement
ಬುಡಾದಿಂದ ಲೇಔಟ್ ವಿನ್ಯಾಸ ಪೂರ್ಣ ರಿಲೀಸ್ ಮಾಡಲು 50 ಲಕ್ಷ ಲಂಚಕ್ಕೆ ಬೇಡಿಕೆಯನ್ನಿಟ್ಟು 10 ಲಕ್ಷ ರೂ. ಲಂಚ ತೆಗೆದುಕೊಳ್ಳುವಾಗ ಲೋಕಾಯುಕ್ತ ಪೊಲೀಸರ ದಾಳಿ ಮಾಡಿದ್ದಾರೆ.
ಬುಡಾ ಆಯುಕ್ತರ ಆದೇಶದ ಮೇರೆಗೆ ಲಂಚದ ಹಣ ತೆಗೆದುಕೊಳ್ಳುತ್ತಿದ್ದ ಆಪ್ತ ಸಿದ್ದು ಹೂಗಾರ ರೆಡ್ ಹ್ಯಾಂಡಾಗಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಂತರ ಬೀದರ್ ನಗರದ ಸ್ವಪ್ನಾ ಹೋಟೆಲ್ ಬಳಿ ಆಯುಕ್ತರ ಬಂಧನ ಮಾಡಲಾಗಿದ್ದು, ನಗರದ ಬಾಲಭವನದ ಬಳಿ ಇರುವ ಲೋಕಾಯುಕ್ತ ಪೊಲೀಸ್ ಠಾಣೆಗೆ ಮೂವರನ್ನು ಬಂಧಿಸಿ ಕರೆದೊಯ್ಯಲಾಗಿದೆ.