ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಮನೋರಮಾ ಮಹಾವಿದ್ಯಾಲಯದಲ್ಲಿ ಬಿಸಿಎ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಗಳಾದ ಪ್ರೊ. ರಾಜೇಶ ಹೊಂಗಲ ಮಾತನಾಡಿ, ವಿದ್ಯಾರ್ಥಿಗಳು ಆದರ್ಶ ವ್ಯಕ್ತಿತ್ವ ಬೆಳಿಸಿಕೊಳ್ಳಬೇಕಾದರೆ ಉತ್ತಮ ಹವ್ಯಾಸಗಳೊಂದಿಗೆ ಗುರು-ಹಿರಿಯರ ಮಾರ್ಗದರ್ಶನದಲ್ಲಿ ಸಾಗಬೇಕು. ಅಂದಾಗ ಮಾತ್ರ ಜ್ಞಾನದ ಅರಿವು ಹೊಂದುವಲ್ಲಿ ಸಫಲತೆ ಪಡೆಯಬಹುದು ಎಂದರು.
ಮಹಾವಿದ್ಯಾಲಯದ ಪ್ರಾಚಾರ್ಯ ಬಿ.ಎಸ್. ಹಿರೇಮಠ ಮಾತನಾಡಿ, ವಿದ್ಯಾರ್ಥಿಗಳಿಗೆ ಕಾರ್ಯಾಗಾರ ಆಯೋಜಿಸಿರುವುದು ಸಂತಸ ತಂದಿದೆ. ವಿದ್ಯಾರ್ಥಿಗಳು ಇಂತಹ ಕಾರ್ಯಾಗಾರ, ಉಪನ್ಯಾಸಗಳಿಂದ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಿರಿ ಎಂದರು.
ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಚೇರಮನ್ ಎನ್.ಎಮ್. ಕುಡತರಕರ ವಹಿಸಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಕಿಶೋರ ಮುದಗಲ್ಲ ಹಾಗೂ ನಿರ್ದೇಶಕರಾದ ಮಂಜುನಾಥ ಕುಡತರಕರ, ಸಂಜಯಕುಮಾರ ಕುಡತರಕರ, ಚೇತನ ಕುಡತರಕರ, ಬಿಸಿಎ ಸಂಯೋಜಕರಾದ ಪ್ರೊ. ಸವಿತಾ ಪೂಜಾರ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.