ಮಂಡ್ಯ:-ಉಚಿತ, ಖಚಿತ, ನಿಶ್ಚಿತ ಅಂದು ಸರ್ಕಾರ ದಿವಾಳಿಯಾಗಿದೆ ಎಂದು ಮಾಜಿ ಸಂಸದೆ ಸುಮಲತಾ ಹೇಳಿದ್ದಾರೆ.
ಈ ಸಂಬಂಧ ಮಂಡ್ಯದಲ್ಲಿ ಮಾತನಾಡಿದ ಅವರು, ʻಸ್ಥಾನಮಾನಕ್ಕಾಗಿ ಸುಮಲತಾ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಚಲುವರಾಯಸ್ವಾಮಿ ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ.
ಕ್ಷೇತ್ರ ಬಿಟ್ಟುಕೊಟ್ಟು ಬಿಜೆಪಿ ಸೇರಿದವಳು ನಾನು. ನಮ್ಮದು ತ್ಯಾಗ ಮಾಡಿರುವ ಕುಟುಂಬ, ಯಾವುದಕ್ಕೂ ಆಸೆ ಪಡುವ ಕುಟುಂಬವಲ್ಲ. ಕ್ಷೇತ್ರವನ್ನ ಬಿಟ್ಟು ಕೊಟ್ಟು ಬಿಜೆಪಿ ಸೇರಿದವಳು ನಾನು, ನಮ್ಮದು ತ್ಯಾಗ ಮಾಡಿರುವ ಕುಟುಂಬ. ಯಾವುದಕ್ಕೂ ಆಸೆ ಪಡುವ ಕುಟುಂಬವಲ್ಲ. ಮೋದಿ ಸರ್ಕಾರದ ಯೋಜನೆಯನ್ನ ಜನರಿಗೆ ತಲುಪಿಸುವ ಆಸೆ ಇದೆ. ಯಾವುದೇ ವೈಯಕ್ತಿಕ ಆಸೆ ನಮಗಿಲ್ಲ. ವೈಯಕ್ತಿಕ ಆಸೆಗಾಗಿ ರಾಜಕಾರಣ ಮಾಡುವವರ ಲೀಸ್ಟ್ ನಮ್ಮ ಮುಂದೆ ಇದೆ ಎಂದು ಕುಟುಕಿದ್ದಾರೆ.
ಬಿಜೆಪಿ ಪಕ್ಷ ಸೇರಿರುವುದೇ ನನಗೆ ಸ್ಥಾನಮಾನ. ಮೋದಿ ಹಿಂದೆ ನಾವು ಇದ್ದೇವೆ, ಅವರ ಕೆಳಗೆ ಕೆಲಸ ಮಾಡ್ತಿರುವುದೇ ನಮಗೆ ಗೌರವ. ನಾನು ಮಂಡ್ಯದಿಂದ ಎಂಪಿ ಆಗಿದ್ದೆ. ಅಂಬರೀಶ್ ಕ್ಯಾಬಿನೆಟ್ ಮಿನಿಸ್ಟರ್ ಆಗಿದ್ದರು. ಕೇಂದ್ರದಲ್ಲಿಯೂ ಮಂತ್ರಿಯಾಗಿದ್ದರು, ಎಲ್ಲವನ್ನೂ ನೋಡಿದ್ದೇವೆ, ಇದಕ್ಕಿಂತ ಇನ್ನೇನು ಸ್ಥಾನಮಾನ ಬೇಕು? ಎಂದು ಪ್ರಶ್ನೆ ಮಾಡಿದ್ದಾರೆ.