ವಿಜಯಸಾಕ್ಷಿ ಸುದ್ದಿ, ಗದಗ: ಆದರ್ಶ ಶಿಕ್ಷಣ ಸಮತಿಯ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಗದಗ ಜಿಲ್ಲಾ ವಲಯ ಮಟ್ಟದ ಎರಡು ದಿನಗಳ ಯುವಜನೋತ್ಸವದಲ್ಲಿ ಗದುಗಿನ ಮನೋರಮಾ ಕಾಲೇಜನ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳಾದ ಕಂಗನ ಪವಾರ ಪಾಶ್ಚಾತ್ಯ ಗಾಯನದಲ್ಲಿ ಪ್ರಥಮ, ಮೆಹಂದಿ ಸ್ಪರ್ಧೆಯಲ್ಲಿ ಉಮ್ಮಿ ಜವೇರಿಯಾ ಪ್ರಥಮ, ಸಯ್ಯದಾ ತಂಜೀಮ್ ಖಾಜಿ ಭಾಷಣ ಸ್ಪರ್ಧೆಯಲ್ಲಿ ಪ್ರಥಮ, ಮೈಮ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳು ಇಂದ್ರಕುಮಾರ, ಅಭಿಷೇಕ, ಸಾಗರ, ಮೆಹಬೂಬ, ಅಮೋಘ, ಪುರುಷೋತ್ತಮ, ಜಾನಪದ ಹಾಡಿನಲ್ಲಿ ದ್ವಿತೀಯ ಸ್ಥಾನ ಪಡೆದ ಅನಿತಾ, ಪ್ರಮೋದಿನಿ, ತನುಜಾ, ಅಕ್ಷತಾ, ಶೃತಿ ಇವರಿಗೆ ವಿಧಾನ ಪರಿಷತ್ ಸದಸ್ಯ ಪ್ರೊ. ಎಸ್.ವ್ಹಿ. ಸಂಕನೂರ ಹಾಗೂ ಗಣ್ಯಮಾನ್ಯರು ಪ್ರಶಸ್ತಿ ನೀಡಿ ಗೌರವಿಸಿದರು.
ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಚೇರಮನ್ ಎನ್.ಎಮ್. ಕುಡತರಕರ, ಪ್ರಾಚಾರ್ಯ ಬಿ.ಎಸ್. ಹಿರೇಮಠ, ಆಡಳಿತಾಧಿಕಾರಿ ಕಿಶೋರ ಮುದಗಲ್ಲ, ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ ಕುಡತರಕರ, ನಿರ್ದೇಶಕರಾದ ಸಂಜಯ ಕುಡತರಕರ, ಚೇತನ ಕುಡತರಕರ ಹಾಗೂ ಕಾಲೇಜ ಸಂಯೋಜಕರುಗಳಾದ ಪ್ರೊ. ಸವಿತಾ ಪೂಜಾರ, ಪ್ರೊ. ಅಲ್ವಿನಾ ಡಿ, ಪ್ರೊ. ಚೈತ್ರಾ ಡಿ ಸೇರಿದಂತೆ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.