ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಸಾಕ್ಷಿ ಹೇಳಲು ಬಂದಿದ್ದ ವ್ಯಕ್ತಿಗೆ ಬೆದರಿಕೆ ಹಾಕಿ ಸಿಕ್ಕಿಬಿದ್ದ ದರ್ಶನ್ ಬಾಡಿಗಾರ್ಡ್

0
Spread the love

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಹೀಗಾಗಿ ಪ್ರಕರಣದಲ್ಲಿ ಕೊಂಚ ಸುಳಿವು ಸಿಕ್ಕರು ಅದನ್ನು ಬಿಡದೆ ಹುಡುಕಿ ತೆಗೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಈಗಾಗಲೇ ಹಲವನ್ನು ವಿಚಾರಣೆ ನಡೆಸಿದ್ದು ಆರೋಪಿಗಳಿಗೆ ಶಿಕ್ಷೆ ನೀಡಿಯೇ ಸಿದ್ದ ಎಂದು ನಿರ್ಧರಿಸಿದ್ದಾರೆ. ಇದೇ ಕಾರಣಕ್ಕೆ ಪ್ರಕರಣದಲ್ಲಿ ಯಾವುದೇ ಪ್ರಮುಖ ವ್ಯಕ್ತಿಗಳು ಬಂದರು ಪೊಲೀಸರು ಮಾತ್ರ ಕೊಂಚವು ಹಿಂಜರಿಯದೆ ಇಂಚಿಂಚೂ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Advertisement

ಕೊಲೆ ಕೇಸ್ ನಲ್ಲಿ ಈಗಾಗಲೇ ಪೊಲೀಸರ ಕೈಗೆ ಹಲವು ಪ್ರಮುಖ ಮಾಹಿತಿ ಸಿಕ್ಕಿದೆ. ಮೊಬೈಲ್ ನಲ್ಲಿ ಡಿಲೀಡ್ ಮಾಡಲಾದ ಪ್ರತಿಯೊಂದು ಸಾಕ್ಷಿಯನ್ನು ರಿಟ್ರೀವ್ ಮಾಡಿದ್ದಾರೆ. ಈ ಮಧ್ಯೆ ಇದೀಗ ದರ್ಶನ್ ಗ್ಯಾಂಗ್‌ ಕೇಸ್‌ಗೆ ಮತ್ತೊಂದು ಸ್ಫೋಟಕ ಸಾಕ್ಷ್ಯ ಪೊಲೀಸರ ಕೈ ಸೇರಿದ್ದು ಇದರಿಂದ ದರ್ಶನ್ ಎಂಡ್ ಗ್ಯಾಂಗ್ ಗೆ ಮತ್ತಷ್ಟು ಸಮಸ್ಯೆಯಾಗುವುದು ಕನ್ಪಾರ್ಮ್ ಆಗಿದೆ.

ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿ ಜೀವ ಬಿಟ್ಟ ಮೇಲೆ ದರ್ಶನ್ ಗ್ಯಾಂಗ್‌ನಿಂದ ಸಾಕ್ಷಿ ನಾಶಕ್ಕೆ ಸಾಕಷ್ಟು ಪ್ರಯತ್ನಗಳು ನಡೆದಿದೆ. ದರ್ಶನ್ ಬಾಡಿಗಾರ್ಡ್‌ನಿಂದಲೇ ಸಾಕ್ಷಿ ನಾಶಕ್ಕೆ ಹುನ್ನಾರ ನಡೆದಿದೆ. ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಏನ್ ಸಿ ಆರ್ ದಾಖಲಾಗಿತ್ತು.

ದರ್ಶನ್ ಬಾಡಿಗಾರ್ಡ್ ನಾಗೇಶ್ ಸಾಕ್ಷಿ ಹೇಳದಂತೆ ಪ್ರಮುಖ ಸಾಕ್ಷಿಗೆ ಬೆದರಿಕೆ ಹಾಕಿದ್ದರಂತೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಸಾಕ್ಷಿಯಾಗಿದ್ದ ವ್ಯಕ್ತಿ ಬಾಡಿಗಾರ್ಡ್ ನಾಗೇಶ್ ವಿರುದ್ಧ ದೂರು ನೀಡಿದ್ದಾರೆ. ಆ ವ್ಯಕ್ತಿ ದರ್ಶನ್ ಗ್ಯಾಂಗ್‌ನಿಂದ ನಾಶ ಮಾಡಲಾಗಿದ್ದ ಬಟ್ಟೆ ಸಂಬಂಧ ಸಾಕ್ಷಿ ನುಡಿಯಲು ಬಂದಿದ್ದರು. ಈ ವೇಳೆ ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯ 100 ಮೀಟರ್ ದೂರದಲ್ಲಿ ಸಾಕ್ಷಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಕೃತ್ಯದ ವೇಳೆ ಬಿಸಾಡಿದ್ದ ಬಟ್ಟೆಗಳ ಕುರಿತು ಬಾಯಿ ಬಿಡದಂತೆ ಸಾಕ್ಷಿಗೆ ಬಾಡಿಗಾರ್ಡ್‌ ನಾಗೇಶ್ ಬೆದರಿಕೆ ಹಾಕಿದ್ದಾರೆ. ಬಟ್ಟೆ ಬಗ್ಗೆ ಬಾಯಿ ಬಿಟ್ಟರೆ ನಿನ್ನನ್ನು ಸುಮ್ಮನೆ ಬಿಡಲ್ಲ ಎಂದಿದ್ದು ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿತ್ತು. ನಾಗೇಶ್ ನನ್ನು ಕರೆಸಿಕೊಂಡು ವಿಚಾರಣೆ ಮಾಡಿದ್ದ ಪೊಲೀಸರು ಈ ಬಗ್ಗೆ ಮುಚ್ಚಳಿಕೆ ಬರೆಸಿಕೊಂಡು ವಾಪಸ್ ಕಳುಹಿಸಿದ್ದಾರಂತೆ.


Spread the love

LEAVE A REPLY

Please enter your comment!
Please enter your name here