Accident: ಕಾರು ಡಿಕ್ಕಿಯಾಗಿ ಎರಡು ವರ್ಷದ ಮಗು ದುರ್ಮರಣ!

0
Spread the love

ಆನೇಕಲ್:- ಕಾರು ಡಿಕ್ಕಿಯಾಗಿ ಎರಡು ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬನ್ನೇರುಘಟ್ಟ ರಸ್ತೆಯ ಶನೇಶ್ವರ ದೇವಸ್ಥಾನ ಮುಂಭಾಗದಲ್ಲಿ ಜರುಗಿದೆ.

Advertisement

ಮಗು ಸಾವಿಗೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ದೇವಾಲಯದ ಮುಂಭಾಗದಲ್ಲೇ ಈ ದುರ್ಘಟನೆ ಸಂಭವಿಸಿದೆ. ತಾಯಿ ಜೊತೆ ದೇವಸ್ಥಾನಕ್ಕೆ ಬಂದಿದ್ದ ವೇಳೆ ಮಗು ಸಾವನ್ನಪ್ಪಿದೆ.

ಮಾದಪಟ್ಟಣದ ನಿವಾಸಿ 2 ವರ್ಷದ ಏಕಾಶ್ ಮೃತ ಬಾಲಕ ಎಂದು ಗುರುತಿಸಲಾಗಿದೆ. ಶನೇಶ್ವರ ದೇವಸ್ಥಾನದ ಬಳಿ ಕಡ್ಲೆಕಾಯಿ ಜಾತ್ರೆ ನಡೆಯುತ್ತಿತ್ತು. ದೇವರ ದರ್ಶನ ಮುಗಿಸಿಕೊಂಡು ತಾಯಿ-ಮಗು ದೇವಸ್ಥಾನದಿಂದ ಹೊರ ಬಂದಿದ್ದರು.

ಕಾರಿನ ಟೈಯರ್ ಮಗು ಮೇಲೆ ಹರಿದು ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಮಗುವಿನ ಮೃತ ದೇಹವನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here