ಪಾದಚಾರಿ ಬಾಲಕನಿಗೆ ಕಾರು ಡಿಕ್ಕಿ: ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು!

0
Spread the love

ಬೀದರ್:- ಔರಾದ್ ತಾಲೂಕು ಜಿರಗಾ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದಿದೆ. ಘಟನೆಯಿಂದ ಬಾಲಕನ ಸ್ಥಿತಿ ಗಂಭೀರ ಆಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆದ್ದಾರಿಯಲ್ಲಿ ಬಾಲಕನಿಗೆ ಕಾರು ಗುದ್ದಿದ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೀದರ್ ಟು ನಾಂದೇಡ್ ರಾಷ್ಟ್ರೀಯ ಹೆದ್ದಾರಿಯ ಜಿರಗಾ ಕ್ರಾಸ್ ಬಳಿ‌ ಈ ಅಪಘಾತ ಸಂಭವಿಸಿದೆ.

Advertisement

ಕಾರು ಗುದ್ದಿದ ರಭಸಕ್ಕೆ ಬಾಲಕನ ಮೇಲೆ ಹಾರಿದ್ದು, ಬಾಲಕ ವಿಕಾಸ್‌ನ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ಬಾಲಕನನ್ನ ಬೀದರ್‌ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದ ಸ್ಥಳದಲ್ಲಿ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here