ಬೆಂಗಳೂರು:- ನಿಮ್ಮ ಪಕ್ಷದಲ್ಲೇ ಒಡಕು ತರಬಹುದು, ಯೋಗೇಶ್ವರ್ ಬಗ್ಗೆ ಎಚ್ಚರ ವಹಿಸಿ ಎಂದು ಕಾಂಗ್ರೆಸ್ ಗೆ ಜೆಡಿಎಸ್ ಮುಖಂಡ ಸುರೇಶ್ ಬಾಬು ಎಚ್ಚರಿಕೆ ಕೊಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್ನವರು ಯೋಗೇಶ್ವರ್ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಕಾಂಗ್ರೆಸ್ ಪಕ್ಷದಲ್ಲೇ ಒಡಕು ತರುತ್ತಾರೆ ಹುಷಾರ್ ಎಂದರು.
ನಮ್ಮ ಶಾಸಕರು ಯಾರು ಮಾರಾಟ ಆಗಲ್ಲ. ಹಿಂದೆ ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಮಾಡುತ್ತೇನೆ ಎಂದು ಹೇಳಿದ್ದು ಯಾರು? 30 ಜನರನ್ನು ಆಪರೇಷನ್ ಮಾಡುತ್ತೇನೆ ಎಂದು ಇದೇ ಯೋಗೇಶ್ವರ್ ಹೇಳಿದ್ದರು. ಕಾಂಗ್ರೆಸ್ ಅಧ್ಯಕ್ಷರಿಗೆ ಯೋಗೇಶ್ವರ್ ಬಗ್ಗೆ ಎಚ್ಚರಿಕೆ ಇರಲಿ. ನಮ್ಮ ಶಾಸಕರು ಯಾರು ಮಾರಾಟಕ್ಕೆ ಇಲ್ಲ. ನಮ್ಮ ಶಾಸಕರು ಮಾರುಕಟ್ಟೆಯಲ್ಲಿ ಸಿಗುವ ವಸ್ತುಗಳು ಅಲ್ಲ. ನಮ್ಮ ಶಾಸಕರು ಸಿದ್ಧಾಂತದ ಮೇಲೆ ರಾಜಕೀಯ ಮಾಡುತ್ತಿದ್ದಾರೆ. ಯಾರು ಪಕ್ಷ ಬಿಟ್ಟು ಹೋಗಲ್ಲ ಎಂದು ತಿರುಗೇಟು ಕೊಟ್ಟರು.
ಅನೇಕರು ಜೆಡಿಎಸ್ ಮುಗಿದೇ ಹೋಯಿತು ಎಂದು ಹೇಳಿದರು. ಮತ್ತೆ ಫಿನಿಕ್ಸ್ನಂತೆ ಎದ್ದು ಬಂತು. ರಾಜ್ಯದಲ್ಲಿ ಜೆಡಿಎಸ್ ಮುಗಿಸೋಕೆ ಎಂದು ಯೋಗೇಶ್ವರ್ ಹೀಗೆ ಹೇಳುತ್ತಿದ್ದಾರೆ. ಜೆಡಿಎಸ್ ಅನ್ನು ತೆಗೆಯೋಕೆ ಯಾರಿಂದಲೂ ಸಾಧ್ಯವಿಲ್ಲ ಎಂದರು.



