HomeSports NewsIPL 2025: ಆರ್‌ಸಿಬಿ ಜೊತೆಗಿನ ನನ್ನ ಅಧ್ಯಾಯ ಮುಗಿದಿದೆ: ಫ್ಯಾನ್ಸ್ ಗೆ ಭಾವನಾತ್ಮಕ ಪತ್ರ ಬರೆದ...

IPL 2025: ಆರ್‌ಸಿಬಿ ಜೊತೆಗಿನ ನನ್ನ ಅಧ್ಯಾಯ ಮುಗಿದಿದೆ: ಫ್ಯಾನ್ಸ್ ಗೆ ಭಾವನಾತ್ಮಕ ಪತ್ರ ಬರೆದ ಫಾಫ್!

For Dai;y Updates Join Our whatsapp Group

Spread the love

ಆರ್‌ಸಿಬಿ ಜೊತೆಗಿನ ನನ್ನ ಅಧ್ಯಾಯ ಮುಗಿದಿದೆ ಎಂದು ಫ್ಯಾನ್ಸ್ ಗೆ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ಭಾವನಾತ್ಮಕ ಪತ್ರ ಬರೆದಿದ್ದಾರೆ.

ಹರಾಜಿಗೂ ಮುನ್ನ ಆರ್​ಸಿಬಿ ಮೂವರು ಆಟಗಾರರನ್ನು ತಂಡದಲ್ಲಿ ಉಳಿಸಿಕೊಂಡಿತ್ತು. ಹೀಗಾಗಿ ಉಳಿದ ಮೂವರನ್ನು ಹರಾಜಿನಲ್ಲಿ ಆರ್​ಟಿಎಮ್ ಬಳಸಿ ಮತ್ತೆ ತಂಡಕ್ಕೆ ಸೇರಿಸಿಕೊಳ್ಳಲಿದೆ ಎಂದು ಭಾವಿಸಿದ್ದರು. ಆ ಮೂವರು ಆಟಗಾರರಲ್ಲಿ ತಂಡದ ಮಾಜಿ ನಾಯಕ ಫಾಫ್ ಡುಪ್ಲೆಸಿಸ್, ಮೊಹಮ್ಮದ್ ಸಿರಾಜ್ ಹಾಗೂ ವಿಲ್ ಜ್ಯಾಕ್ಸ್ ಸೇರಿದ್ದರು. ಆದರೆ ಹರಾಜಿನ ವೇಳೆ ಆರ್​ಸಿಬಿ, ಈ ಮೂವರ ಮೇಲೆ ಆರ್​ಟಿಎಮ್ ಬಳಸಲಿಲ್ಲ.

ಇದೀಗ ಡೆಲ್ಲಿ ಪಾಲಾಗಿರುವ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ RCB ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ. ಆರ್‌ಸಿಬಿ ಜೊತೆ ಕಳೆದ ಮೂರು ವರ್ಷಗಳನ್ನು ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ. ‘ ಆರ್‌ಸಿಬಿ ಜೊತೆಗಿನ ನನ್ನ ಅಧ್ಯಾಯ ಮುಗಿದಿದೆ. ಆರ್​ಸಿಬಿ ಜೊತೆಗಿನ ಈ ಮೂರು ವರ್ಷಗಳ ಪ್ರಯಾಣ ಅದ್ಭುತವಾಗಿತ್ತು. ನಾನು ಮೂರು ವರ್ಷಗಳ ಹಿಂದೆ ಆರ್‌ಸಿಬಿಗೆ ಸೇರಿದಾಗ, ಈ ಪ್ರಯಾಣವು ಇಷ್ಟು ಅದ್ಭುತವಾಗಿ ಆರಂಭವಾಗುತ್ತದೆ ಎಂದು ನನಗೆ ತಿಳಿದಿರಲಿಲ್ಲ.

ಬೆಂಗಳೂರು ನಗರ ಮತ್ತು ಆರ್‌ಸಿಬಿಯ ಅಭಿಮಾನಿಗಳೆಂದರೆ ನನಗೆ ತುಂಬಾ ಅಚ್ಚುಮೆಚ್ಚು. ಬೆಂಗಳೂರು ಮತ್ತು ಬೆಂಗಳೂರಿನ ಜನರು ನನ್ನ ವ್ಯಕ್ತಿತ್ವದ ಭಾಗವಾಗಿದ್ದಾರೆ. ನಾನು ಯಾವಾಗಲೂ ಈ ನೆನಪುಗಳನ್ನು ಮತ್ತು ಒಡನಾಟವನ್ನು ನನ್ನೊಂದಿಗೆ ಕೊಂಡೊಯ್ಯುತ್ತೇನೆ. ಈ ಮೂರು ವರ್ಷಗಳನ್ನು ತುಂಬಾ ವಿಶೇಷವಾಗಿಸಿದ್ದಕ್ಕಾಗಿ ಧನ್ಯವಾದಗಳು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುವುದು ನನ್ನ ವೃತ್ತಿಜೀವನದ ಶ್ರೇಷ್ಠ ಅನುಭವಗಳಲ್ಲಿ ಒಂದಾಗಿದೆ. ಅಭಿಮಾನಿಗಳ ಶಕ್ತಿ, ಉತ್ಸಾಹ ಮತ್ತು ಬೆಂಬಲವು ಅದನ್ನು ನಿಜವಾಗಿಯೂ ಅನನ್ಯಗೊಳಿಸುತ್ತದೆ. ಪ್ರತಿ ಬಾರಿ ಮೈದಾನಕ್ಕೆ ಕಾಲಿಟ್ಟಾಗಲೂ ಅಲ್ಲಿನ ವಾತಾವರಣ ಮಾಂತ್ರಿಕತೆಯಿಂದ ಕೂಡಿರುತ್ತಿತ್ತು.

ವಿದಾಯ ಹೇಳುವುದಕ್ಕೂ ಮುನ್ನ ನಾನು, ಅಭಿಮಾನಿಗಳು, ನನ್ನ ತಂಡದ ಸದಸ್ಯರು, ಸಿಬ್ಬಂದಿ, ತರಬೇತುದಾರರು ಮತ್ತು ಮಾಲೀಕರು ಸೇರಿದಂತೆ ಎಲ್ಲರಿಗೂ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ನಿಮ್ಮೊಂದಿಗೆ ಈ ಪ್ರಯಾಣದ ಭಾಗವಾಗಿದಿದ್ದು ನನಗೆ ಗೌರವವಾಗಿದೆ ಎಂದು ಬರೆದುಕೊಂಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!