ವಿಜಯಸಾಕ್ಷಿ ಸುದ್ದಿ, ಗದಗ: ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದೇ ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಿರ್ವಹಿಸಬೇಕು. ಪರಿಷ್ಕರಣಾ ಕಾರ್ಯವನ್ನು ಪಾರದರ್ಶಕವಾಗಿ, ವ್ಯವಸ್ಥಿತವಾಗಿ ಜರುಗಿಸಿ ಅಂತಿಮ ಮತದಾರರ ಪಟ್ಟಿ ತಯಾರಿಕೆಗೆ ಕ್ರಮ ವಹಿಸಲು ಜಿಲ್ಲಾ ಉಸ್ತುವಾರಿ ಕಾಯದರ್ಶಿ ಹಾಗೂ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ರಮಣದೀಪ ಚೌಧರಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲೆಯ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪರಿಶೀಲನೆ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸ್ವೀಕೃತವಾದ ಅರ್ಜಿಗಳಲ್ಲಿ ಮರಣ ಹೊಂದಿದವರ, ಹೆಸರುಗಳ ತಿದ್ದುಪಡಿ, ವರ್ಗಾವಣೆಗೆ ಸಂಬAಧಿಸಿದAತೆ ಸಂಬAಧಿತ ಅಧಿಕಾರಿಗಳು ಪರಿಶೀಲನೆ ನಡೆಸಿ ಅನುಮೋದನೆ ನೀಡಬೇಕು. ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ಸಾರ್ವಜನಿಕರಿಂದ ಸ್ವೀಕೃತವಾದ ಅರ್ಜಿಗಳನ್ನು ವಿಳಂಬಕ್ಕೆ ಆಸ್ಪದ ನೀಡದೇ ಜಾಗರೂಕತೆಯಿಂದ ವಿಲೇವಾರಿ ಮಾಡಲು ತಿಳಿಸಿದರು.
ಮತದಾರರ ಪಟ್ಟಿಯಿಂದ ವಿವಿಧ ಕಾರಣಗಳಿಂದ ಹೆಸರುಗಳನ್ನು ತೆಗೆದು ಹಾಕುವ ಪ್ರಕ್ರಿಯೆ ಕುರಿತು ಸಂಬAಧಿತ ಅಧಿಕಾರಿಗಳು ಪುನರ್ ಪರಿಶೀಲನೆ ಕೈಗೊಂಡು ಪರಿಷ್ಕರಣೆ ಕಾರ್ಯದಲ್ಲಿ ಯಾವುದೇ ಲೋಪದೋಷಗಳಿಲ್ಲದಂತೆ ವ್ಯವಸ್ಥಿತವಾಗಿ ಜರುಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ನಿರ್ದೇಶನ ನೀಡಿದರು.
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮಾತನಾಡಿ, ವಿವಿಧ ಕಾರಣಗಳಿಂದ ವಲಸೆ ಹೋಗಿರುವ, ನಿಧನ ಹೊಂದಿರುವ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವ ಪ್ರಕ್ರಿಯೆಯಲ್ಲಿ ಸಂಬAಧಿತ ಅಧಿಕಾರಿಗಳು ಹೆಚ್ಚಿನ ಆಸಕ್ತಿಯಿಂದ ಕೆಲಸ ನಿರ್ವಹಿಸಬೇಕು. ಈಗಾಗಲೇ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಮನೆ ಮನೆ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ 29-10-2024ರವರೆಗೆ ಕರಡು ಮತದಾರರ ಪಟ್ಟಿಯ ಪ್ರಕಾರ 2,98,283 ಮತದಾರರಿದ್ದಾರೆ. ಆ ಪೈಕಿ 4,47,418 ಪುರುಷ ಮತದಾರರು, 4,50,865 ಮಹಿಳಾ ಮತದಾರರಿರುತ್ತಾರೆ ಎಂದು ತಿಳಿಸಿದ ಜಿಲ್ಲಾಧಿಕಾರಿಗಳು, ಫಾರ್ಮ್ ನಂ.6, ಫಾರ್ಮ್ ನಂ. 7, ಫಾರ್ಮ್ ನಂ. 8ರ ಕುರಿತು ಮಾಹಿತಿ ನೀಡಿದರು. ಕರಡು ಮತದಾರರ ಯಾದಿಗಳನ್ನು ಈಗಾಗಲೇ ಮುಖ್ಯ ಚುನಾವಣಾಧಿಕಾರಿಗಳ ವೆಬ್ಸೈಟ್ ತಿತಿತಿ.ಛಿeoಞಚಿಡಿಟಿಚಿಣಚಿಞಚಿ.ಞಚಿಡಿ.ಟಿiಛಿ.iಟಿ ನೇದ್ದರಲ್ಲಿ ಪ್ರಕಟಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸವರಾಜ ಕೆ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.



