ಹಾಸನ: ಅಂಗಾಂಗವನ್ನು ದಾನ ಮಾಡುವ ಮೂಲಕ ಬಡ ಕೂಲಿ ಕಾರ್ಮಿಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಹಾಸನದ ಗುಂಡೇಗೌಡಕೊಪ್ಪಲಿನ ನಿವಾಸಿಯಾಗಿದ್ದ 47 ವರ್ಷದ ಮಧು ಗಾರೆ ಕೆಲಸ ಮಾಡುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದ.
Advertisement
ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಧು ಸಾವನ್ನಪ್ಪಿದ್ದು, ಮಧು ಸಾವಿನ ನಂತರ ಕುಟುಂಬಸ್ಥರು ಮಧು ಅಂಗಾಂಗವನ್ನು ದಾನ ಮಾಡಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಮಧುವಿನ ಅಂಗಾಂಗ ದಾನ ಮಾಡಲಾಗಿದೆ.