ಸಿಲಿಕಾನ್ ಸಿಟಿ ಜನರೇ ಎಚ್ಚರ: ಬೆಂಗಳೂರಿನಲ್ಲಿ ಹೆಚ್ಚಾಯ್ತು ಚಿರತೆ ಕಾಟ, ಒಬ್ಬಂಟಿ ಹೋಗೋದು ಸೇಫ್ ಅಲ್ಲ!

0
Spread the love

ಬೆಂಗಳೂರು:- ಇತ್ತೀಚೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಿರತೆ ಕಾಟ ಹೆಚ್ಚಾಗಿದೆ. ಅದರಲ್ಲೂ ಬೆಂಗಳೂರು ಹೊರ ವಲಯದ ಆನೇಕಲ್ ಭಾಗದಲ್ಲಿ ಚಿರತೆ ಹಾವಳಿ ಜೋರಾಗಿದ್ದು, ಒಬ್ಬಂಟಿಯಾಗಿ ಯಾರು ಓಡಾಡದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚರಿಕೆ ಕೊಟ್ಟಿದ್ದಾರೆ.

Advertisement

ಆನೇಕಲ್ ತಾಲೂಕಿನ ಜಿಗಣಿ ಸಮೀಪದ ನಿಸರ್ಗ ಬಡಾವಣೆ ಮತ್ತು ಲೋಟಸ್ ಬಡಾವಣೆ ಸುತ್ತಮುತ್ತ ಚಿರತೆ ಓಡಾಡುತ್ತಿದ್ದು, ಚಿರತೆ ಓಡಾಟದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಚಾರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದು ಅರಣ್ಯ ಇಲಾಖೆ ಅಧಿಕಾರಿಗಳು ಕಳೆದ ರಾತ್ರಿ ಚಿರತೆಗಾಗಿ ಹುಡುಕಾಟ ನಡೆಸಿದ್ದಾರೆ.

ಆದ್ರೆ ರಾತ್ರಿ ಚಿರತೆ ಎಲ್ಲೂ ಸಹ ಪತ್ತೆ ಆಗಿಲ್ಲ. ಇನ್ನು ನಿಸರ್ಗ ಬಡಾವಣೆ ಸೇರಿದಂತೆ ಸುತ್ತಮುತ್ತ ಇರುವ ಎಲ್ಲಾ ಬಡಾವಣೆ ನಿವಾಸಿಗಳು ರಾತ್ರಿ ಸಮಯದಲ್ಲಿ ಒಬ್ಬೊಬ್ಬರೇ ಆಚೆ ಓಡಾಡಬೇಡಿ ಎಂದು ಅರಣ್ಯ ಇಲಾಖೆಯಿಂದ ಎಚ್ಚರಿಕೆ ನೀಡುತ್ತಿದ್ದಾರೆ.

ಜೊತೆಗೆ ಇತ್ತೀಚಿಗೆ ಬನ್ನೇರುಘಟ್ಟ ಕಾಡಂಚಿನ ಗ್ರಾಮ ಹಾಗೂ ಬಡಾವಣೆಗಳಲ್ಲಿ ಆದಷ್ಟು ಎಚ್ಚರಿಕೆಯಿಂದ ಇರಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಸೂಚನೆ ನೀಡುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here