ಕ್ರಿಮಿನಲ್ ಕೆಲಸ ಮಾಡಿ ಜೈಶ್ರೀರಾಮ ಅಂದ್ರೆ ಎಲ್ಲವೂ ಮುಚ್ಚಿ ಹೋಗುತ್ತಾ?: ಪ್ರಿಯಾಂಕ್ ಖರ್ಗೆ

0
Spread the love

ಕಲಬುರಗಿ: ಕ್ರಿಮಿನಲ್ ಕೆಲಸ ಮಾಡಿ ಜೈಶ್ರೀರಾಮ ಅಂದ್ರೆ ಎಲ್ಲವೂ ಮುಚ್ಚಿ ಹೋಗುತ್ತಾ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯತ್ನಾಳ್ ಬಸವಣ್ಣ ಅವರನ್ನ ಹೇಡಿ ಎನ್ನುತ್ತಾರೆ. ಇದಕ್ಕೆ ಬಿಜೆಪಿಯ ಒಬ್ಬರೂ ಈವರೆಗೆ ತುಟಿ ಬಿಚ್ಚಿಲ್ಲ.

Advertisement

ಇಷ್ಟೆಲ್ಲಾ ವಿದ್ಯಮಾನಗಳು ನಡೆಯುತ್ತಿದ್ದಾಗ್ಯೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಎಲ್ಲಿದ್ದಾರೋ ಗೊತ್ತಾಗುತ್ತಿಲ್ಲ. ಬಸವಣ್ಣ ಅಂದ್ರೆ ನಿಮಗೆ ಅಷ್ಟೊಂದು ಅಲರ್ಜಿನಾ? ಕ್ರಿಮಿನಲ್ ಕೆಲಸ ಮಾಡಿ ಜೈಶ್ರೀರಾಮ ಅಂದ್ರೆ ಎಲ್ಲವೂ ಮುಚ್ಚಿ ಹೋಗುತ್ತಾ? ಲೇವಡಿ ಮಾಡಿದ್ದಾರೆ.

ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ‌ ಸಂಪುಟ ಪುನಾರಚನೆ ಕುರಿತು ಚರ್ಚಿಸಲು ದೆಹಲಿಗೆ ಹೋಗಿರಲಿಲ್ಲ. ಪ್ರಿಯಾಂಕಾ ಗಾಂಧಿ ಇತ್ತೀಚೆಗೆ ನೂತನ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರಿಗೆ ಶುಭಾಶಯ ಕೋರಲು ತೆರಳಿದ್ದರು. ಈ ವೇಳೆ ಮುಖ್ಯಮಂತ್ರಿಗಳು ಎಐಸಿಸಿ ಅಧ್ಯಕ್ಷರನ್ನು ಸಹಜವಾಗಿ ಭೇಟಿ ಮಾಡಿದ್ದಾರೆ ಅಷ್ಟೇ ಎಂದರು.


Spread the love

LEAVE A REPLY

Please enter your comment!
Please enter your name here