Bangalore: ಬೆಳ್ಳಂಬೆಳಗ್ಗೆ ಮನೆಯಲ್ಲಿದ್ದ ಸಿಲಿಂಡರ್ ಬ್ಲಾಸ್ಟ್: ಮೂವರ ಸ್ಥಿತಿ ಗಂಭೀರ

0
Spread the love

ಆನೇಕಲ್:‌ ಬೆಳ್ಳಂಬೆಳಗ್ಗೆ ಮನೆಯಲ್ಲಿದ್ದ ಸಿಲಿಂಡರ್ ಬ್ಲಾಸ್ಟ್ ಆಗಿ ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಕಾಚನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಬದನ್ ದಾಸ್, ದಯಾಲ್, ಗುಲಾಭ್ ಗೆ ಗಾಯವಾಗಿದೆ. ಈ ಮೂವರು ಯುವಕರು ರಮೇಶ್ ಎಂಬುವವರ ಮನೆಯಲ್ಲಿ ಬಾಡಿಗೆಗಿದ್ದರು. ,ಐಕಾನ್ ಲೇಔಟ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಗಳಾಗಿ ಕೆಲಸ ಮಾಡುತ್ತಿದ್ದರು. ರಾತ್ರಿ ಮನೆಯಲ್ಲಿ ಎಣ್ಣೆ ಪಾರ್ಟಿ ಮಾಡಿ, ಮತ್ತಿನಲ್ಲೇ ಸಿಲಿಂಡರ್ ಕೂಡ ಅಪ್ ಮಾಡದೆ ಹಾಗೆ ಮಲಗಿದ್ದಾರೆ.

Advertisement

ಬೆಳಗ್ಗೆ ಎದ್ದು ಲೈಟ್ ಹಾಕುತ್ತಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿದ್ದು, ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಮನೆಯಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿದ್ದು,ನಾರಾಯಣ ಹೆಲ್ತ್ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಸೂರ್ಯಸಿಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೂರ್ಯಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here