ನಾವು ಯತ್ನಾಳ್ ಬೆನ್ನಿಗೆ ನಿಲ್ಲುತ್ತೇವೆ, ಕೇಂದ್ರ ‌ನಾಯಕರ ಮನವೊಲಿಸುತ್ತೇವೆ: ರಮೇಶ್ ಜಾರಕಿಹೊಳಿ

0
Spread the love

ಬೆಳಗಾವಿ: ನಾವು ಯತ್ನಾಳ್​ ಬೆನ್ನಿಗೆ ನಿಲ್ಲುತ್ತೇವೆ, ಕೇಂದ್ರ ‌ನಾಯಕರ ಮನವೊಲಿಸುತ್ತೇವೆ ಎಂದು ಶಾಸಕ ರಮೇಶ್​ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯತ್ನಾಳ್​ ಅಥವಾ ನನ್ನನ್ನು ಅಧ್ಯಕ್ಷನನ್ನಾಗಿ ಮಾಡಬೇಡಿ. ಒಂದೇ ಸಮುದಾಯಕ್ಕೆ ಸೀಮಿತವಾದವರಿಗೆ ಅಧ್ಯಕ್ಷ ನಮಗೆ ಬೇಡ. ಎಲ್ಲರನ್ನೂ ಸಮಾನವಾಗಿ ಕಾಣಲು ಸಮರ್ಥರಿದ್ದವರಿಗೆ ಮಾತ್ರ ಅಧ್ಯಕ್ಷ ಸ್ಥಾನ ಕೊಡಿ ಎಂದರು.

Advertisement

ಇನ್ನೂ ಯತ್ನಾಳ್​ಗೆ ಬಿಜೆಪಿ ಕೇಂದ್ರ ಸಮಿತಿಯಿಂದ ಶೋಕಾಸ್ ನೋಟಿಸ್ ವಿಚಾರದ ಕುರಿತು ಮಾತನಾಡಿ, “ಯತ್ನಾಳ್​ಗೆ ಶೋಕಾಸ್ ನೋಟಿಸ್ ಇಂದು ಬಂದಿದ್ದಲ್ಲ. ಎರಡು ದಿನಗಳ ಹಿಂದೆಯೇ ಬಂದಿದೆ. ಆದರೆ, ಮಾಧ್ಯಮಗಳಲ್ಲಿ ಇಂದು ತೋರಿಸುತ್ತಿದ್ದಾರೆ. ನಾವು ಯತ್ನಾಳ್​ ಬೆನ್ನಿಗೆ ನಿಲ್ಲುತ್ತೇವೆ. ಕೇಂದ್ರ ‌ನಾಯಕರ ಮನವೊಲಿಸುತ್ತೇವೆ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here