ಚಿಕ್ಕಮಗಳೂರು:– ಕೊಪ್ಪ ತಾಲೂಕಿನ ಮರಕಟ್ಟೆ ಗ್ರಾಮದಲ್ಲಿ ಒಂದು ಅಚ್ಚರಿ ಘಟನೆ ಜರುಗಿದೆ. ಕಾಲು ಜಾರಿ 60 ಅಡಿ ಆಳದ ಬಾವಿಗೆ ಬಿದ್ದಿದ್ದ 94 ವರ್ಷದ ವೃದ್ಧೆಯನ್ನು ಪವಾಡ ರೀತಿಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಬಚಾವ್ ಮಾಡಿದ್ದಾರೆ.
Advertisement
ವೃದ್ಧೆಯನ್ನು ಕಮಲ ಎಂದು ಗುರುತಿಸಲಾಗಿದೆ. ನೀರಿನಲ್ಲಿ ಮುಳುಗದಂತೆ ಬಾವಿಯೊಳಗೆ ಪೈಪ್ ಹಿಡಿದುಕೊಂಡು ಒಂದು ಗಂಟೆಗೂ ಹೆಚ್ಚು ಕಾಲ ಅವರು ಸಾವು ಬದುಕಿನ ನಡುವೆ ಹೋರಾಡಿದ್ದಾರೆ.
ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದೆ. ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ವೃದ್ಧೆಯನ್ನು ರಕ್ಷಿಸಿದ್ದಾರೆ.