ಡಿ.4ರಂದು `ಸಂತ ರಾಜಕಾರಣಿ ಡಿ.ಆರ್. ಪಾಟೀಲ’ ಗ್ರಂಥ ಬಿಡುಗಡೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸಂತ ರಾಜಕಾರಣಿ ಎಂದೇ ಹೆಸರಾಗಿರುವ ಮಾಜಿ ಶಾಸಕ ಡಿ.ಆರ್. ಪಾಟೀಲರ ಅಭಿನಂದನಾ ಗ್ರಂಥ ಡಿ. 4ರಂದು ಬೆಳಿಗ್ಗೆ 10.30ಕ್ಕೆ ತೋಂಟದಾರ್ಯ ಮಠದ ಆವರಣದ ಸಿದ್ಧಲಿಂಗ ಶ್ರೀಗಳ ಸಭಾಂಗಣದಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಗುರಣ್ಣ ಬಳಗಾನೂರ ಮಾಹಿತಿ ನೀಡಿದರು.

Advertisement

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐದು ದಶಕದಿಂದ ಸಕ್ರಿಯ ರಾಜಕಾರಣದಲ್ಲಿರುವ ಡಿ.ಆರ್. ಪಾಟೀಲರನ್ನು ಹತ್ತಿರದಿಂದ ಅರಿತಿರುವ ಜೆ.ಕೆ. ಜಮಾದಾರ ಅವರು ಈ ಗ್ರಂಥವನ್ನು ಸಂಪಾದಿಸಿದ್ದಾರೆ ಎಂದರು.

ಕಾರ್ಯಕ್ರಮದ ಸಾನ್ನಿಧ್ಯವನ್ನು ತೋಂಟದ ಸಿದ್ಧರಾಮ ಶ್ರೀಗಳು, ನಿರ್ಭಯಾನಂದ ಶ್ರೀಗಳು ವಹಿಸಲಿದ್ದು, ಸಭಾಪತಿ ಬಸವರಾಜ ಹೊರಟ್ಟಿ ಘನ ಉಪಸ್ಥಿತಿ ವಹಿಸುವರು. ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ವಹಿಸಲಿದ್ದು, ಗ್ರಂಥವನ್ನು ನಮ್ಮ ರಾಜ್ಯದ ಗಾಂಧಿ ಸ್ಮಾರಕ ಭವನದ ಅಧ್ಯಕ್ಷ ವೂಡೆ ಪಿ.ಕೃಷ್ಣ ಬೆಂಗಳೂರು ಇವರು ಬಿಡುಗಡೆ ಮಾಡಲಿದ್ದಾರೆ.

ಕಂದಾಯ ಸಚಿವ ಕೃಷ್ಣ ಭೈರೇಗೌಡ, ಹಣಕಾಸು ಆಯೋಗದ ಅಧ್ಯಕ್ಷ ನಾರಾಯಣಸ್ವಾಮಿ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ, ಶಾಸಕ ಸಿ.ಸಿ. ಪಾಟೀಲ, ರೋಣ ಶಾಸಕ ಜಿ.ಎಸ್. ಪಾಟೀಲ, ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ವಿ.ಪ ಸದಸ್ಯ ಸಲೀಂ ಅಹ್ಮದ, ಎಸï.ವಿ. ಸಂಕನೂರ, ಮಾಜಿ ಸಚಿವ ಎಸ್.ಎಸ್. ಪಾಟೀಲ, ಎ.ಎಂ. ಹಿಂಡಸಗೇರಿ, ಕಳಕಪ್ಪ ಬಂಡಿ, ಮಾಜಿ ಸಂಸದ ಆರ್.ಎಸ್. ಪಾಟೀಲ, ಐ.ಜಿ. ಸನದಿ, ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಬಿ.ಬಿ. ಅಸೂಟಿ, ಅಶೋಕ ಮಂದಾಲಿ, ರವಿ ಮೂಲಿಮನಿ, ಸಂಗು ಕೆರಕಲಮಟ್ಟಿ, ಶಿವರಾಜ ಕೋಟಿ ಮುಂತಾದವರು ಇದ್ದರು.


Spread the love

LEAVE A REPLY

Please enter your comment!
Please enter your name here