HDFC ಬ್ಯಾಂಕ್ ATMಗೆ ಕನ್ನ: ಖಾಕಿ ಬಲೆಗೆ ಬಿದ್ದ ಖತರ್ನಾಕ್ ಕಳ್ಳ!

0
Spread the love

ಬೆಳಗಾವಿ:- HDFC ಬ್ಯಾಂಕ್ ATM ನಲ್ಲಿ ಬರೋಬ್ಬರಿ ಎಂಟು ಲಕ್ಷ ಕಳ್ಳತನ ಮಾಡಿದ್ದ ಖತರ್ನಾಕ್ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Advertisement

ಆರೋಪಿಯು, ಹೆಂಡತಿಗೆ ಮಂಗಳಸೂತ್ರ ಕೊಡಿಸಲು ಈ ಕೃತ್ಯ ಎಸಗಿರೋದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಬಂಧಿತ ಆರೋಪಿಯನ್ನು ಕೃಷ್ಣಾ ಸುರೇಶ್ ದೇಸಾಯಿ ಎಂದು ಗುರುತಿಸಲಾಗಿದೆ. ಈತ ಹೆಚ್‌ಡಿಎಫ್‌ಸಿ ಬ್ಯಾಂಕ್ ಎಟಿಎಂನಲ್ಲಿ ಎಂಟು ಲಕ್ಷ ಹಣ ಎಗರಿಸಿದ್ದ.

ಕೃಷ್ಣಾ ಎಟಿಎಂಗೆ ಹಣ ಹಾಕುವ ಕೆಲಸ ಮಾಡುತ್ತಿದ್ದ‌. ಎಟಿಎಂ ಮಷಿನ್ ಕೀ ತನ್ನ ಬಳಿಯೇ ಇರ್ತಿತ್ತು. ಟೀಂ ಜೊತೆಗೆ ಬಂದು ಹಣ ಹಾಕಿ ಬಳಿಕ ಸಂಜೆ ಒಬ್ಬನೇ ಬಂದು ಕಳ್ಳತನ ಮಾಡಿದ್ದಾನೆ.

ಹಣ ಹಾಕಲು ಇರುತ್ತಿದ್ದ ಎಟಿಎಂ ಮಷಿನ್ ಕೀ ಬಳಸಿಯೇ ಎಂಟು ಲಕ್ಷ ಹಣ ಕಳ್ಳತನ ಮಾಡಿದ್ದಾನೆ. ಎರಡು ದಿನದ ಬಳಿಕ ಈತನ ಕೃತ್ಯ ಬೆಳಕಿಗೆ ಬಂದಿತ್ತು. ಸಿಸಿಟಿವಿ ದೃಶ್ಯ ಪರಿಶೀಲನೆ ಮಾಡಿದಾಗ ಎಟಿಎಂನಿಂದ ತಮ್ಮ‌ ಸಿಬ್ಬಂದಿ ಹಣ ಕದ್ದಿದ್ದು ಕಂಡು ಇತರರು ಶಾಕ್‌ ಆಗಿದ್ದರು.

ಈ ಕುರಿತು ಮಾರ್ಕೆಟ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ.


Spread the love

LEAVE A REPLY

Please enter your comment!
Please enter your name here