ರೇಣುಕಾಸ್ವಾಮಿ ಕೊಲೆ ಕೇಸ್: ಇಂದು ದರ್ಶನ್-ಪವಿತ್ರಾಗೆ ಸಿಗುತ್ತಾ ಬೇಲ್!?

0
Spread the love

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಲ್ ಮೇಲೆ ಹೊರಗಿರುವ ದರ್ಶನ್ ಹಾಗೂ ಜೈಲಿನಲ್ಲೇ ಇರುವ ಪವಿತ್ರಾಗೌಡರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದ್ದು, ಜಡ್ಜ್ ತೀರ್ಪಿನತ್ತ ಎಲ್ಲರ ಚಿತ್ತ ನೆಟ್ಟಿದೆ.

Advertisement

ನಟ ದರ್ಶನ್ , ನಟಿ ಪವಿತ್ರಾಗೌಡ , ನಾಗರಾಜ್, ಲಕ್ಷ್ಮಣ್, ಅನುಕುಮಾರ್ ಹಾಗೂ ಜಗದೀಶ್ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಈಗಾಗಲೇ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ವಾದ ಮಂಡಿಸಿದ್ದಾರೆ.

ಉಳಿದ ಆರೋಪಿಗಳ ಪರವಾಗಿ ಅವರ ವಕೀಲರು ಇಂದು ವಾದ ಮಂಡಿಸಲಿದ್ದಾರೆ ಎನ್ನಲಾಗಿದೆ. ಪವಿತ್ರಾಗೌಡ ಪರವಾಗಿ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ವಾದಿಸಲಿದ್ದಾರೆ. ಆ ಬಳಿಕ ಪ್ರಕರಣದ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿರುವ ಪ್ರಸನ್ನ ಕುಮಾರ್ ವಾದ ಮಾಡಲಾಗಿದ್ದಾರೆ.

ಆರು ಆರೋಪಿಗಳ ಜಾಮೀನಿಗೆ ಆಕ್ಷೇಪಿಸಿ ಎಸ್ ಪಿಪಿ ಪ್ರಸನ್ನ ಕುಮಾರ್ ವಾದ ಮಾಡಲಿದ್ದಾರೆ. ಮಧ್ಯಾಹ್ನದ ಬಳಿಕ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ ಎಂದು ತಿಳಿದು ಬಂದಿದೆ.

ನಟ ದರ್ಶನ್ ಗೆ ಒಂದೆಡೆ ಆಪರೇಷನ್ ಟೆನ್ಷನ್ ಮತ್ತೊಂದೆಡೆ ಜಾಮೀನು ಸಿಗುತ್ತಾ ಅನ್ನೋ ಚಿಂತೆಯಲ್ಲಿದ್ದಾರೆ. ಇದೆಲ್ಲದಕ್ಕೂ ಇಂದು ಉತ್ತರ ಸಿಗಲಿದೆ.


Spread the love

LEAVE A REPLY

Please enter your comment!
Please enter your name here