ಶಿವಮೊಗ್ಗ: ಅಖಂಡ ಭಾರತದ ನಿರ್ಮಾಣಕ್ಕೆ ಸಾಧು ಸಂತರ ನೇತೃತ್ವ ಅವಶ್ಯಕತೆ ಇದೆ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಇವತ್ತೂ ಸಹ ಬಾಂಗ್ಲದಲ್ಲಿ ಹಿಂದೂ ದೇವಸ್ಥಾನ ಧ್ವಂಸ ಮಾಡಿದ್ದಾರೆ.
ಇದೇ ರೀತಿ ಮುಂದುವರೆದರೆ ಬಾಂಗ್ಲಾದೇಶ, ಪಾಕಿಸ್ತಾನ ಮುಂದೊಂದು ದಿನ ಇರಲ್ಲ. ಅದು ಅಖಂಡ ಭಾರತ ಆಗುತ್ತದೆ. ಇಂದು ಸಾಧು ಸಂತರು ಹೋರಾಟಕ್ಕೆ ಬಂದಿದ್ದಾರೆ. ಅಖಂಡ ಭಾರತದ ನಿರ್ಮಾಣಕ್ಕೆ ಸಾಧು ಸಂತರ ನೇತೃತ್ವ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.
ಇನ್ನೂ ಭಾರತದ ಹಿಂದೂಗಳು ಈ ದೇಶದ ಮುಸ್ಲಿಮರಿಗೆ ಸಿಕ್ಕ ಸಿಕ್ಕ ಕಡೆ ಹೊಡೆದರೆ ಮುಸ್ಲಿಮರು ಉಳಿಯುತ್ತಾರಾ? ಮುಸ್ಲಿಮರು ಹಿಂದೂ ಯುವತಿಯರ ಮೇಲೆ ಅತ್ಯಾಚಾರ ನಡೆಸುತ್ತಿದ್ದಾರೆ. ಆದರೆ ಒಬ್ಬ ಹಿಂದೂ ಸಹ ಮಸೀದಿ ಧ್ವಂಸ ಮಾಡಲು ಹೋಗಿಲ್ಲ. ರಾಮ ಮಂದಿರ ನಿರ್ಮಾಣ ಮಾಡಲು ಬಾಬ್ರಿ ಮಸೀದಿ ಧ್ವಂಸ ಮಾಡಿದ್ದು ಬಿಟ್ಟರೆ ಬೇರೆ ಮಸೀದಿ ಧ್ವಂಸ ಮಾಡಿಲ್ಲ. ಹಿಂದೂಗಳು ಶಾಂತಿಪ್ರಿಯರು ಎಂದು ಹೇಳಿದ್ದಾರೆ.