ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು, ಮಾದಕ ವಸ್ತುಗಳ ಬಳಕೆ ಬೇಡ: ನಟ ಉಪೇಂದ್ರ

0
Spread the love

ಧಾರವಾಡ: ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು, ಮಾದಕ ವಸ್ತುಗಳ ಬಳಕೆ ಬೇಡ ಎಂದು ನಟ ಉಪೇಂದ್ರ ಹೇಳಿದರು. ಧಾರವಾಡದ ಜೆಎಸ್ಎಸ್ ಕಾಲೇಜಿಗೆ ಆಗಮಿಸಿದ ನಟ ಮಾದಕ ವಸ್ತುಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಿದ್ದಾರೆ. ನಂತರ ಮಾತನಾಡಿದ ಅವರು, ಈ ಭೂಮಿ ಮೇಲೆ ಅನೇಕ ಮಾದಕ ವಸ್ತುಗಳಿವೆ.

Advertisement

ಆದರೆ, ಯಾವು ಯಾವ ರೀತಿ ಬದುಕಬೇಕು? ಜೀವನ ಕಟ್ಟಿಕೊಳ್ಳಬೇಕು ಎಂಬ ವಿಚಾರ  ನಮ್ಮ ತಲೆಯಲ್ಲಿ ರಬೇಕು. ಯಾರು ಏನೇ ಹೇಳಿದರೂ ಎಲ್ಲವನ್ನೂ ಕೇಳಬೇಕು ಆದರೆ, ಮೊದಲು ನಮ್ಮನ್ನು ನಾವು ನಂಬಬೇಕು. ನಮಗಾಗಿ ಬದುಕಬೇಕು. ಮಾದಕ ವಸ್ತುಗಳ ಬಳಕೆ ಬೇಡ. ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು ಎಂದರು. ಇದೇ ವೇಳೆ ಅವರು ಯುಐ ಸಿನಿಮಾದ ಡೈಲಾಗ್ ಹೇಳಿದರು. ನೃತ್ಯ ಮಾಡಿ ವಿದ್ಯಾರ್ಥಿಗಳನ್ನು ರಂಜಿಸಿದರು.

ನಟ ಉಪೇಂದ್ರ ಅವರು ಜೆಎಸ್ಎಸ್ ಕಾಲೇಜಿಗೆ ಬರುತ್ತಿದ್ದಾರೆ ಎಂಬ ಸುದ್ದಿ ತಿಳಿದ ತಕ್ಷಣ ಜೆಎಸ್ಎಸ್ ಕಾಲೇಜು ಆವರಣದಲ್ಲಿ ವಿದ್ಯಾರ್ಥಿ ಸಮೂಹವೇ ಜಮಾಯಿಸಿತ್ತು. ನಟ ಉಪೇಂದ್ರ ಅವರು ತಮ್ಮ”ಯುಐ” ಸಿನಿಮಾದ ಪ್ರಮೋಷನ್‌ಗಾಗಿ ಹುಬ್ಬಳ್ಳಿಗೆ ಬಂದಿದ್ದರು. ಇದೇ ಸಂದರ್ಭದಲ್ಲಿ ಮಾದಕ ವಸ್ತುಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಪೊಲೀಸರು ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here