ವಿಜಯಸಾಕ್ಷಿ ಸುದ್ದಿ, ರೋಣ: ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಡಿಸೆಂಬರ್ 1ರಿಂದ 30ರವರೆಗೆ `ತೆರಿಗೆ ವಸೂಲಾತಿ ವಿಶೇಷ ಅಭಿಯಾನ’ ಹಮ್ಮಿಕೊಳ್ಳಲಾಗಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ವಸೂಲಾತಿ ಮಾಡುವ ನಿಟ್ಟಿನಲ್ಲಿ ಪ್ರತಿ ಗ್ರಾ.ಪಂಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ.ಕಂದಕೂರ ಹೇಳಿದರು.
ತಾಲೂಕಿನ ಡ.ಸ. ಹಡಗಲಿ ಗ್ರಾಮ ಪಂಚಾಯಿತಿಗೆ ಕರ ವಸೂಲಾತಿ ಅಭಿಯಾನ ಮತ್ತು ಮನರೇಗಾ ಕಾಮಗಾರಿ ಪರಿಶೀಲನೆಗೆ ಆಗಮಿಸಿದ ಸಂದರ್ಭದಲ್ಲಿ ಪಂಚಾಯತ ಸಿಬ್ಬಂದಿಗಳೊAದಿಗೆತೆರಿಗೆ ವಸೂಲಾತಿ ಕುರಿತು ಚರ್ಚಿಸಿ ಅವರು ಮಾತನಾಡಿದರು.
11/12/2024 ಕರ ವಸೂಲಾತಿ ವಿಶೇಷ ಅಭಿಯಾನವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಂಡಿದ್ದು, ಆ ದಿನ ಗ್ರಾ.ಪಂ ಕರ ವಸೂಲಿಗಾರರು ಮುಂಜಾನೆ 7 ಗಂಟೆಗೆ ಗ್ರಾ.ಪಂ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಅಭಿವೃದ್ಧಿ ಅಧಿಕಾರಿಗಳ ಜೊತೆಗೂಡಿ ಮನೆ ಮನೆಗೆ ಭೇಟಿ ನೀಡಿ ಹೆಚ್ಚಿನ ಮಟ್ಟದಲ್ಲಿ ತೆರಿಗೆ ವಸೂಲಿ ಮಾಡಬೇಕು. ಎಲ್ಲರೂ ತಾಲೂಕಿನ ಪ್ರಗತಿಗೆ ಹಾಗೂ ಗ್ರಾಮದ ಪ್ರಗತಿಗೆ ಹೆಚ್ಚಿನ ಒತ್ತು ಕೊಡಿ ಎಂದರು.
ತಾಲೂಕಿನ ಎಲ್ಲಾ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ಕರ ವಸೂಲಾತಿ ಅಭಿಯಾನವನ್ನು ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು, ನೀರಗಂಟಿಗಳು ಗ್ರಾಮ ಪಂಚಾಯತ ಸಿಬ್ಬಂದಿಗಳು ಜೊತೆಗೆ ಸೇರಿಕೊಂಡು ಮನೆಗಳು, ಅಂಗಡಿ ಮುಂಗಟ್ಟು, ಮಳಿಗೆಗಳಿಗೆ ತೆರಳಿ ಕರ ವಸೂಲಾತಿ ಕೈಗೊಂಡು ಅಭಿಯಾನ ಯಶಸ್ವಿಗೊಳಿಸಲು ಸಹಕಾರ ನೀಡಿದರೆ ನಿಗದಿತ ಗುರಿಯನ್ನು ಸಾಧಿಸಬಹುದು ಎಂದರು.
ಈ ಸಂದರ್ಭದಲ್ಲಿ ಡ.ಸ ಹಡಗಲಿ ಗ್ರಾ.ಪಂ ಅಧ್ಯಕ್ಷ ಗಂಗಾಧರ ಕಮ್ಮಾರ, ಗ್ರಾ.ಪಂ ಸದಸ್ಯರು, ಅಭಿವೃದ್ಧಿ ಅಧಿಕಾರಿ ಈಶ್ವರಗೌಡ ಪಾಟೀಲ, ತಾ.ಪಂ ತಾಂತ್ರಿಕ ಸಂಯೋಜಕ ಪ್ರವೀಣ ಸೂಡಿ ಸೇರಿದಂತೆ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.
ಗ್ರಾಮ ಪಂಚಾಯಿತಿಗೆ ಸಲ್ಲಿಕೆ ಆಗಬೇಕಾಗಿರುವ ತೆರಿಗೆಯಲ್ಲಿ ಶೇ.೧೦೦ರಷ್ಟು ವಸೂಲಿ ಮಾಡುವುದು ಗ್ರಾಮ ಪಂಚಾಯಿತಿಯ ಪ್ರಾಥಮಿಕ ಹೊಣೆಗಾರಿಕೆಯಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಕ್ರೋಢೀಕರಿಸಿಕೊಳ್ಳಿ. ಅಂದಾಗ ಗ್ರಾಮದ ಅಭಿವೃದ್ಧಿ ಸಾಧ್ಯ ಎಂದು ಚಂದ್ರಶೇಖರ ಬಿ.ಕಂದಕೂರ ಹೇಳಿದರು.