ರೇಣುಕಾಸ್ವಾಮಿ ಕೊಲೆ ಕೇಸ್: ಇಂದು ದರ್ಶನ್​ ಜಾಮೀನು ತೀರ್ಪು ಪ್ರಕಟ!

0
Spread the love

ಬೆಂಗಳೂರು:- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ನಲ್ಲಿ ಮಹತ್ವದ ತೀರ್ಪು ಹೊರ ಬೀಳಲಿದ್ದು, ಈ ಮೂಲಕ ದಾಸನ ಸಿನಿ ಭವಿಷ್ಯ ಮುಂದೆ ಏನು ಎಂಬುವುದು ನಿರ್ಧಾರವಾಗಲಿದೆ.

Advertisement

ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರ ನೇತೃತ್ವದ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಕಳೆದ ಕೆಲ ವಾರಗಳಿಂದ ನಡೆಯುತ್ತಿತ್ತು. ದರ್ಶನ್ ಪರವಾಗಿ ವಕೀಲ ಸಿವಿ ನಾಗೇಶ್ ವಾದ ಮಂಡಿಸಿ, ದರ್ಶನ್ ಅವರನ್ನು ಈ ಪ್ರಕರಣದಲ್ಲಿ ಸಿಕ್ಕಿಸಲಾಗಿದೆ ಎಂದು ಹೇಳಿದ್ದಾರೆ.

ಅತ್ತ, ಸರ್ಕಾರಿ ಪರ ವಕೀಲ ಪ್ರಸನ್ನ ಕುಮಾರ್ ಅವರು ದರ್ಶನ್ ಅವರು ಈ ಪ್ರಕರಣದಲ್ಲಿ ಭಾಗಿ ಆಗಿದ್ದಾರೆ ಎಂಬುದಕ್ಕೆ ಸಾಕ್ಷಿಗಳು ಸಿಕ್ಕಿವೆ ಎಂಬುದನ್ನು ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದ್ದಾರೆ.

ಸದ್ಯ ಕೋರ್ಟ್ ಎರಡೂ ಕಡೆಯ ವಾದವನ್ನು ಆಲಿಸಿದ್ದು, ತೀರ್ಪನ್ನು ಕಾಯ್ದಿರಿಸಿದೆ. ಇಂದು ಮಧ್ಯಾಹ್ನ 2:30ರ ಸುಮಾರಿಗೆ ತೀರ್ಪನ್ನು ನೀಡಲಿದೆ. ಸದ್ಯ ದರ್ಶನ್ ಅವರು ಆಸ್ಪತ್ರೆಯಿಂದಲೇ ಟೆನ್ಷನ್​​ನಲ್ಲಿ ಇದಕ್ಕಾಗಿ ಕಾಯುತ್ತಿದ್ದಾರೆ. ಇದು ದರ್ಶನ್ ಅವರ ಸಿನಿ ಭವಿಷ್ಯವನ್ನೂ ನಿರ್ಧರಿಸಲಿದೆ.

ದರ್ಶನ್ ಅವರು ‘ಡೆವಿಲ್’ ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದರು. ಈ ಸಿನಿಮಾದ ಶೂಟ್ ನಡೆಯುವಾಗಲೇ ಅವರು ಅರೆಸ್ಟ್ ಆಗಬೇಕಾಯಿತು. ಒಂದೊಮ್ಮೆ ಇಂದು ಜಾಮೀನು ಸಿಕ್ಕರೆ ದರ್ಶನ್ ಶೂಟಿಂಗ್​ಗೆ ಮರಳಬಹುದು.

ಆದರೆ, ಇಂದೂ ಜಾಮೀನು ಸಿಕ್ಕಿಲ್ಲ ಎಂದರೆ ಸಿನಿಮಾದ ಕೆಲಸ ಆರಂಭ ಆಗೋದು ಮತ್ತಷ್ಟು ವಿಳಂಬ ಆಗಲಿದೆ. ಅವರು ಜಾಮೀನಿಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಬೇಕಾಗುತ್ತದೆ.


Spread the love

LEAVE A REPLY

Please enter your comment!
Please enter your name here