ಕೇಂದ್ರ ಸರ್ಕಾರ ಯೋಜನೆ ಹೆಸರಿನಲ್ಲಿ ಅಭಿವೃದ್ಧಿಗಿಂತ ಪ್ರಚಾರ ಹೆಚ್ಚು ಮಾಡುತ್ತಿದೆ: ಸಂತೋಷ್‌ ಲಾಡ್‌

0
Spread the love

ಬೆಳಗಾವಿ: ಕೇಂದ್ರ ಸರ್ಕಾರವು ಯೋಜನೆ ಹೆಸರಿನಲ್ಲಿ ಅಭಿವೃದ್ಧಿಗಿಂತ ಪ್ರಚಾರ ಹೆಚ್ಚು ಮಾಡುತ್ತಿದೆ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್‌ ಲಾಡ್‌ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಒನ್ ನೇಷನ್ ಒನ್ ಎಲೆಕ್ಷನ್ ಸ್ಲೋಗನ್ ಆಗಬಾರದು. ಇದು ಕೇವಲ ಪ್ರಚಾರ ಆಗಬಾರದು. ಕೇಂದ್ರ ಸರ್ಕಾರವು ಯೋಜನೆ ಹೆಸರಿನಲ್ಲಿ ಅಭಿವೃದ್ಧಿಗಿಂತ ಪ್ರಚಾರ ಹೆಚ್ಚು ಮಾಡುತ್ತಿದೆ. 11 ವರ್ಷಗಳಿಂದ ಇದೆ ನಡೆಸುತ್ತಿದೆ ಎಂದು ಪರೋಕ್ಷವಾಗಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Advertisement

ಸದನದಲ್ಲಿ ವಕ್ಫ್ ಚರ್ಚೆ ವಿಚಾರವಾಗಿ ನಾವು ಚರ್ಚೆಗೆ ತಯಾರಿದ್ದೇವೆ. ವಿರೋಧ ಪಕ್ಷಗಳು ವಕ್ಫ್ ಕುರಿತು ಯಾವುದೇ ದಾಖಲೆ ಇಲ್ಲದೆ ಮಾತನಾಡುತ್ತಿದ್ದಾರೆ. ವಕ್ಪ್ ಅನಾನುಕೂಲವಾಗಿದೆ ಎಂದು ದಾಖಲೆ ನೀಡಲಿ. ಬಿಜೆಪಿ ಸರ್ಕಾರದ ಅವಧಿಯಲ್ಲಿ 4500 ಕ್ಕೂ ಅಧಿಕ ಆಸ್ತಿ ವಕ್ಪ್ ಮಾಡಿದ್ದಾರೆ ಎಂದರು. ಉತ್ತರ ಕಾರ್ನಾಟಕ ಅಭಿವೃದ್ಧಿ ಕುರಿತು ಬಿಜೆಪಿಯವರಿಗೆ ಮನಸ್ಸಿಲ್ಲ. ಯುಟಿ‌ ಖಾದರ್ ಸಭಾಪತಿಗಳಾದ ಬಳಿಕ‌ ಅತಿಹೆಚ್ಚು ಚರ್ಚೆ ಮಾಡಲು ಬಿಜೆಪಿಯವರಿಗೆ ನೀಡಿದ್ದಾರೆಂದು ಹೇಳಿದರು.


Spread the love

LEAVE A REPLY

Please enter your comment!
Please enter your name here