ವಿಜಯಸಾಕ್ಷಿ ಸುದ್ದಿ, ಗದಗ
ಗಣರಾಜ್ಯೋತ್ಸವ ದಿನ ದೆಹಲಿಯಲ್ಲಿ ನಡೆದ ಅಹಿತಕರ ಘಟನೆಗೆ ನೈತಿಕ ಹೊಣೆ ಹೊತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ಘಟಕದ ವತಿಯಿಂದ ಗದಗ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಟ್ರ್ಯಾಕ್ಟರ್ ರ್ಯಾಲಿ ವೇಳೆ ನಡೆದ ಅಹಿತಕರ ಘಟನೆಗೆ ಪ್ರತಿಭಟನಕಾರರನ್ನು ಹೊಣೆ ಮಾಡುವುದು ಸರಿಯಲ್ಲ. ರೈತ ಹಾಗೂ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ತಕ್ಷಣ ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು.
ಮಹ್ಮದ ಎನ್. ಶಾಲಗಾರ, ಅಶೋಕ ಮಂದಾಲಿ, ವಿನೋದ ಶಿದ್ಲಿಂಗ, ಶಿವರಾಜ ಕೋಟಿ, ಯೂಸುಫ್ ಡಂಬಳ, ಆಸೀಫ್ ರಾಮೇನಹಳ್ಳಿ, ಸರಫರಾಜ ಬಬರ್ಚಿ, ರಿಯಾಜ ಕುದುರಿ, ಅಬ್ದುಲ್ ಗಫೂರ್ ಪಾಶ್ಚಾಪುರ, ಬಾಬುಸಾಬ ನಾರಾಯಣಕೇರಿ, ಕಾರ್ಯಕರ್ತರು ಉಪಸ್ಥಿತರಿದ್ದರು.