ಹೊಸ ವರ್ಷಾಚರಣೆ: ಏನೇ ಅಹಿತಕರ ಘಟನೆ ನಡೆದ್ರೂ ಏರಿಯಾ ಡಿಸಿಪಿ ಹೊಣೆಯಾಗಲಿದ್ದಾರೆ – ಗೃಹ ಸಚಿವ

0
Spread the love

ಬೆಂಗಳೂರು: ಹೊಸ ವರ್ಷಾಚರಣೆಯಲ್ಲಿ ಏನೇ ಅಹಿತಕರ ಘಟನೆ ನಡೆದ್ರೂ ಏರಿಯಾ ಡಿಸಿಪಿ ಹೊಣೆಯಾಗಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,  ಬೆಂಗಳೂರಲ್ಲಿ 7 ಲಕ್ಷ ಜನ ಮಿಡ್​ನೈಟ್​ ಸೆಲೆಬ್ರೆಷನ್​ನಲ್ಲಿ ಭಾಗಿಯಾಗುತ್ತಾರೆ.

Advertisement

ಏನೇ ಅಹಿತಕರ ಘಟನೆ ನಡೆದ್ರೂ ಏರಿಯಾ ಡಿಸಿಪಿ ಹೊಣೆಯಾಗಲಿದ್ದಾರೆ. ಟ್ರಾಫಿಕ್ ನಿರ್ವಹಣೆ ಸಮಸ್ಯೆ ಆಗದಂತೆ ಮೆಟ್ರೋ, ಆಟೋಗಳು, ಬಸ್​ಗಳ ಓಡಾಟ ಸೇರಿದಂತೆ ಹಲವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ.

ಎಂ.ಜಿ.ರಸ್ತೆ, ಬ್ರಿಗೇಡ್​ ರಸ್ತೆಯಲ್ಲಿ ಸಂಭ್ರಮಾಚರಣೆಗೆ ನಿರ್ಬಂಧ ಇಲ್ಲ ಎಂದಿದ್ದಾರೆ. ಇನ್ನೂ ಹೊಸ ವರ್ಷಾಚರಣೆ ದಿನ ಯಾವುದೇ ಅಹಿತಕರ ಘಟನೆ ಆಗಬಾರದು. ಬಂದೋಬಸ್ತ್​ ಕ್ರಮಗಳನ್ನು ಕೈಗೊಳ್ಳುವಂತೆ ಸಭೆ ನಡೆಸಲಾಗಿದೆ. ಮಹಿಳಾ ಸುರಕ್ಷತೆಗೆ ಹೆಚ್ಚು ಒತ್ತು ನೀಡಲಾಗುತ್ತದೆ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here