ಬೆಂಗಳೂರು: ಹೊಸ ವರ್ಷಾಚರಣೆಯಲ್ಲಿ ಏನೇ ಅಹಿತಕರ ಘಟನೆ ನಡೆದ್ರೂ ಏರಿಯಾ ಡಿಸಿಪಿ ಹೊಣೆಯಾಗಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೆಂಗಳೂರಲ್ಲಿ 7 ಲಕ್ಷ ಜನ ಮಿಡ್ನೈಟ್ ಸೆಲೆಬ್ರೆಷನ್ನಲ್ಲಿ ಭಾಗಿಯಾಗುತ್ತಾರೆ.
Advertisement
ಏನೇ ಅಹಿತಕರ ಘಟನೆ ನಡೆದ್ರೂ ಏರಿಯಾ ಡಿಸಿಪಿ ಹೊಣೆಯಾಗಲಿದ್ದಾರೆ. ಟ್ರಾಫಿಕ್ ನಿರ್ವಹಣೆ ಸಮಸ್ಯೆ ಆಗದಂತೆ ಮೆಟ್ರೋ, ಆಟೋಗಳು, ಬಸ್ಗಳ ಓಡಾಟ ಸೇರಿದಂತೆ ಹಲವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ.
ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಸಂಭ್ರಮಾಚರಣೆಗೆ ನಿರ್ಬಂಧ ಇಲ್ಲ ಎಂದಿದ್ದಾರೆ. ಇನ್ನೂ ಹೊಸ ವರ್ಷಾಚರಣೆ ದಿನ ಯಾವುದೇ ಅಹಿತಕರ ಘಟನೆ ಆಗಬಾರದು. ಬಂದೋಬಸ್ತ್ ಕ್ರಮಗಳನ್ನು ಕೈಗೊಳ್ಳುವಂತೆ ಸಭೆ ನಡೆಸಲಾಗಿದೆ. ಮಹಿಳಾ ಸುರಕ್ಷತೆಗೆ ಹೆಚ್ಚು ಒತ್ತು ನೀಡಲಾಗುತ್ತದೆ ಎಂದು ಹೇಳಿದ್ದಾರೆ.