ಮೈಸೂರು:- ಸಿದ್ದರಾಮಯ್ಯ ಸರ್ಕಾರದಲ್ಲಿ ಖಜಾನೆ ಖಾಲಿ ಆಗಿರೋದು ನಿಜ ಎಂದು ಸಚಿವ ವಿ ಸೋಮಣ್ಣ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಸಿಟಿ ರವಿ ಅಶ್ಲೀಲ ಪದ ಬಳಕೆ ಆರೋಪ ಪ್ರಕರಣ ನಾನಾ ಸ್ವರೂಪ ಮತ್ತು ಪೊಲಿಟಿಕಲ್ ಟರ್ನ್ ಪಡೆದುಕೊಳ್ಳುತ್ತಿರುವ ಮಧ್ಯೆ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಪ್ರಕರಣ ಬೆಳಸಬಾರದು ಎಂಬ ನಿಲ್ಲುವಿತ್ತು ಎಂದು ಸೋಮಣ್ಣ ಹೊಸ ಬಾಂಬ್ ಸಿಡಿಸಿದರು.
ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಶುರು ಮಾಡಿದೆ. ಸ್ಪೀಕರ್ ತನಿಖೆ ಮಾಡಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಿ ನಮ್ಮದೇನು ಅಭ್ಯಂತರ ಇಲ್ಲ. ನಮ್ಮದೇ ತಪ್ಪಾಗಿದ್ದರು ನಾವು ಅದನ್ನು ಸ್ವೀಕರಿಸುತ್ತೇವೆ. ಅದು ಬಿಟ್ಟು ಸಿ.ಟಿ.ರವಿಗೆ ಟಾರ್ಚರ್ ಕೊಟ್ಟಿದ್ದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದ್ದಾರೆ.
ಸಿದ್ದರಾಮಯ್ಯ ಸರ್ಕಾರದಲ್ಲಿ ಖಜಾನೆ ಖಾಲಿಯಾಗಿದೆ. ರಾಜ್ಯ ಸರ್ಕಾರದಲ್ಲಿ ಬಹಳಷ್ಟು ಹುಳುಕು ಶುರುವಾಗಿವೆ. ಹುಳುಕು ಮುಚ್ಚಿಕೊಳ್ಳಲು ಈ ವಿಚಾರ ದೊಡ್ಡದು ಮಾಡುತ್ತಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಕೇಂದ್ರದಲ್ಲಿ ಯಾರಿಗಾದರೂ ದೂರು ಕೊಡಲಿ ತೊಂದ್ರೆ ಇಲ್ಲ ಎಂದು ಹೇಳಿದ್ದಾರೆ.