ಬೆಂಗಳೂರು:- ಬೆಂಗಳೂರಿನ ದೇವನಹಳ್ಳಿಯ ವಿಶ್ವನಾಥಪುರದ ಹೋಟೆಲ್ ಒಂದಕ್ಕೆ ಏಕಾಏಕಿ ನುಗ್ಗಿದ ದುರ್ಷರ್ಮಿಗಳು ಊಟ ಮಾಡುತ್ತಿದ್ದ ವ್ಯಕ್ತಿ ಮೇಲೆ ಮಚ್ಚಿನಿಂದ ಮನಸ್ಸೋ ಇಚ್ಛೆ ದಾಳಿ ಮಾಡಿದ ಘಟನೆ ಜರುಗಿದೆ.
ಮಂಜುನಾಥ್ ಮಾರಣಾಂತಿಕ ಹಲ್ಲೆಗೊಳಗಾದ ವ್ಯಕ್ತಿ. ದುಷ್ಕರ್ಮಿಗಳು, ಮಚ್ಚಿನಿಂದ ಮಂಜುನಾಥ್ ಎಂಬಾತನ ಕೈ ಕತ್ತರಿಸಿ, ಕಾಲು ದೇಹದ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಶ್ರೀರಾಮ್ ಎಂಬುವನೇ ದಾಳಿ ಮಾಡಿ ಪರಾರಿಯಾಗಿದ್ದಾನೆ. ಹಲ್ಲೆಗೊಳಗಾದ ಮಂಜುನಾಥ್, ಶ್ರೀರಾಮ್ನ ಅತ್ತೆ ಮಗ. ತಂದೆ ಕೊಲೆ ಪ್ರಕರಣದಲ್ಲಿ ಸಹಾಯಕ್ಕೆ ಬಂದಿಲ್ಲವೆಂದು ಶ್ರೀರಾಮ್, ಮಂಜುನಾಥ್ ಮೇಲೆ ದ್ವೇಷ ಬೆಳೆಸಿದ್ದ, ಇಂದು ಏಕಾಏಕಿ ಅಟ್ಯಾಕ್ ಮಾಡಿದ್ದಾನೆ.
ಮಟ, ಮಟ ಮಧ್ಯಾಹ್ನ 12 ಗಂಟೆಗೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಡೆಡ್ಲಿ ಅಟ್ಯಾಕ್ ನಡೆದಿದೆ. ಮಂಜುನಾಥ್ ಎಂಬುವವರನ್ನು ಚೇಸ್ ಮಾಡಿಕೊಂಡು ಹೋಟೆಲ್ಗೆ ನುಗ್ಗಿದ್ದಾರೆ. ಏಕಾಏಕಿ ಅಟ್ಯಾಕ್ ಮಾಡಿದ ಗ್ಯಾಂಗ್ ಮಂಜುನಾಥ್ ಕೈ ಕತ್ತರಿಸಿ, ಕಾಲು ದೇಹದ ಮೇಲೆ ಲಾಂಗ್ ಬೀಸಿ ಪರಾರಿಯಾಗಿದ್ದಾರೆ.
ತಂದೆಯ ಕೊಲೆ ಕೇಸ್ ನಲ್ಲಿ ಸಹಾಯ ಮಾಡಿಲ್ಲವೆಂದು ಶ್ರೀರಾಮ್, ಮಂಜುನಾಥ್ ಮೇಲೆ ದ್ವೇಷ ಬೆಳೆಸಿದ್ದ. ಇವತ್ತು ಮಂಜುನಾಥ್ನನ್ನು ಹಿಂಬಾಲಿಸಿ ಮಚ್ಚು ಬೀಸಿ ಪರಾರಿಯಾಗಿದ್ದಾರೆ. ಮಚ್ಚು ಬೀಸಿದಕ್ಕೆ ಹೋಟೆಲ್ ಸಿಬ್ಬಂದಿ ಸೇರಿದಂತೆ ಅಲ್ಲಿದ್ದ ಜನರು ಭಯಗೊಂಡಿದ್ದಾರೆ.
ಇನ್ನು ವಿಷಯ ತಿಳಿದು ಸ್ಥಳಕ್ಕೆ ಚಿಕ್ಕಜಾಲ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.