ಬೆಂಕಿ ಅವಘಡ: ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಲಾರಿ, ತಪ್ಪಿದ ಅನಾಹುತ!

0
Spread the love

ಕಾರವಾರ:- ಹೆದ್ದಾರಿಯಲ್ಲಿ ಲಾರಿಯೊಂದು ಹೊತ್ತಿ ಉರಿದಿದ್ದು, ಪರಿಣಾಮ ಲಕ್ಷಾಂತರ ಮೌಲ್ಯದ ಸಕ್ಕರೆ ಬೆಂಕಿಗಾಹುತಿ ಆಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹುಬ್ಬಳ್ಳಿ-ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿ 63 ರ ಅರೆಬೈಲ್ ಘಟ್ಟದಲ್ಲಿ ಜರುಗಿದೆ.

Advertisement

ಮೊದಲು ಯಲ್ಲಾಪುರ ವ್ಯಾಪ್ತಿಯ ಅರೆಬೈಲ್ ಘಟ್ಟದಲ್ಲಿ ಇಂಜಿನ್‌ನಲ್ಲಿ ಶಾರ್ಟ್‌ ಸರ್ಕ್ಯೂಟ್ ಆಗಿದ್ದು, ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಲಾರಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಲಾರಿಯಿಂದ ಜಿಗಿದು ಚಾಲಕ, ಕ್ಲೀನರ್ ಪ್ರಾಣ ರಕ್ಷಿಸಿಕೊಂಡಿದ್ದಾರೆ.

ಬೆಂಕಿ ಅವಘಡಕ್ಕೆ ಲಕ್ಷಾಂತರ ಮೌಲ್ಯದ ಸಕ್ಕರೆ ಹಾಗೂ ಲಾರಿ ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಹೆದ್ದಾರಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದು, ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here