ನವದೆಹಲಿ: ಕಾಂಗ್ರೆಸ್ ಪಕ್ಷವು ದೇಶದ ಹೆಚ್ಚುತ್ತಿರುವ ನೀರಿನ ಸಂರಕ್ಷಣೆಯ ಅಗತ್ಯಕ್ಕೆ ಎಂದಿಗೂ ಗಮನ ಕೊಡಲಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಮಧ್ಯಪ್ರದೇಶದ ಖಜುರಾಹೊದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರ ದೂರದೃಷ್ಟಿ ದೇಶದ ಜಲ ಸಂಪನ್ಮೂಲಗಳ ಬಲವರ್ಧನೆ, ಅವುಗಳ ನಿರ್ವಹಣೆ ಮತ್ತು ಅಣೆಕಟ್ಟು ನಿರ್ಮಾಣಕ್ಕೆ ಗಣನೀಯ ಕೊಡುಗೆ ನೀಡಿದೆ ಎಂದು ಹೇಳಿದ್ದಾರೆ.
Advertisement
ಪ್ರಮುಖ ನದಿ ಕಣಿವೆ ಯೋಜನೆಗಳ ಅಭಿವೃದ್ಧಿ ಮತ್ತು ಕೇಂದ್ರ ಜಲ ಆಯೋಗದ ರಚನೆಯಲ್ಲಿ ಅಂಬೇಡ್ಕರ್ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಕಾಂಗ್ರೆಸ್ ಪಕ್ಷವು ದೇಶದ ಹೆಚ್ಚುತ್ತಿರುವ ನೀರಿನ ಸಂರಕ್ಷಣೆಯ ಅಗತ್ಯಕ್ಕೆ ಎಂದಿಗೂ ಗಮನ ಕೊಡಲಿಲ್ಲ. 21ನೇ ಶತಮಾನದ ಪ್ರಮುಖ ಸವಾಲೆಂದರೆ ನೀರಿನ ಭದ್ರತೆ. 21ನೇ ಶತಮಾನದಲ್ಲಿ ಸರಿಯಾದ ನಿರ್ವಹಣೆಯೊಂದಿಗೆ ಸಮರ್ಪಕ ಜಲಸಂಪನ್ಮೂಲ ಹೊಂದಿರುವ ದೇಶಗಳು ಮಾತ್ರ ಮುನ್ನಡೆಯಲಿವೆ ಎಂದಿದ್ದಾರೆ.