ಆನೇಕಲ್:-ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ಬಂಡಾಪುರ ಬಳಿ ಇನ್ಸ್ಪೆಕ್ಟರ್ ರಾಘವ್ ಗೌಡ ಆತ್ಮರಕ್ಷಣೆಗಾಗಿ ರೌಡಿಶೀಟರ್ ಓರ್ವನ ಕಾಲಿಗೆ ಗುಂಡು ಹೊಡೆದು ಬಂಧಿಸಿದ ಘಟನೆ ಜರುಗಿದೆ.
Advertisement
ಸುನೀಲ್ @ ಹಾವೇರಿ ಬಂಧಿತ ರೌಡಿಶೀಟರ್. ತಿಂಗಳ ಹಿಂದೆ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಕಳೆದ ಸಾಕಷ್ಟು ದಿನಗಳಿಂದ ತಲೆಮರೆಸಿಕೊಂಡಿದ್ದ. ಇದೀಗ ಬಂಡಾಪುರ ಬಳಿ ಆರೋಪಿ ಇರುವಿಕೆ ಬಗ್ಗೆ ಮಾಹಿತಿ ಪಡೆದಿದ್ದ ಪೋಲಿಸರು, ಆರೋಪಿಯನ್ನು ಬಂಧಿಸಲು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆ ಆರೋಪಿ ದಾಳಿಗೆ ಮುಂದಾಗಿದ್ದಾನೆ. ಹೀಗಾಗಿ ಆತ್ಮರಕ್ಷಣೆಗಾಗಿ ಅತ್ತಿಬೆಲೆ ಇನ್ಸ್ಪೆಕ್ಟರ್ ರಾಘವ್ ಗೌಡ ಅವರು ಆರೋಪಿ ಕಾಲಿಗೆ ಗುಂಡೇಟು ಹಾರಿಸಿ ಅರೆಸ್ಟ್ ಮಾಡಿದ್ದಾರೆ.
ಇನ್ನೂ ಗಾಯಾಳು ಯ ಸುನೀಲ್ ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.