ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

0
Spread the love

ಖ್ಯಾತ ಮಲಯಾಳಂ ಲೇಖಕ, ಚಲನಚಿತ್ರ ನಿರ್ದೇಶಕ ಎಂ.ಟಿ.ವಾಸುದೇವನ್ ನಾಯರ್ (91) ನಿಧನ ಹೊಂದಿದ್ದಾರೆ. ಕಳೆದ 11 ದಿನಗಳಿಂದ ಹೃದಯಾಘಾತದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಬೇಬಿ ಮೆಮೋರಿಯಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಲೇಖಕ ಅಷ್ಟೇ ಅಲ್ಲದೆ ಮಲಯಾಳಂ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.

Advertisement

ಸಾಕಷ್ಟು ಸಿನಿಮಾಗಳಿಗೆ ಸ್ಕ್ರೀನ್ ಪ್ಲೇ ಹಾಗೂ ಸಾಹಿತ್ಯವನ್ನೂ ಬರೆದಿದ್ದಾರೆ. ಹೀಗಾಗಿ ಸಾಹಿತ್ಯ ಲೋಕ ಅಷ್ಟೇ ಅಲ್ಲ. ಎಂಟಿ ವಾಸುದೇವನ್ ಅವರನ್ನು ಕಳೆದುಕೊಂಡು ಸಿನಿಮಾ ಲೋಕ ಕೂಡ ಶೋಕಸಾಗರದಲ್ಲಿ ಮುಳುಗಿದೆ. ಅವರು ಜ್ಞಾನಪೀಠ ಪ್ರಶಸ್ತಿ, ಎಳುತಚ್ಚನ್ ಪುರಸ್ಕಾರಂ, ವಯಲಾರ್ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ವಲ್ಲತ್ತೋಳ್ ಪುರಸ್ಕಾರಂ, ಮತ್ತು ಜೆಸಿ ಡೇನಿಯಲ್ ಪುರಸ್ಕಾರಕ್ಕೆ ಭಾಜನರಾಗಿದ್ದರು. 


Spread the love

LEAVE A REPLY

Please enter your comment!
Please enter your name here