ಬೆಂಗಳೂರು: ಡೆತ್ ನೋಟ್ ಬರೆದು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನರಸಿಂಹ ಮೂರ್ತಿ (59) ಆತ್ಮಹತ್ಯೆ ಮಾಡಿಕೊಂಡ ಮುಖ್ಯ ಶಿಕ್ಷಕನಾಗಿದ್ದು, ಹೊಸಕೋಟೆಯ ಜಡಗನಹಳ್ಳಿ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅದಲ್ಲದೆ ಜನವರಿ 15 ಕ್ಕೆ ಸೇವೆಯಿಂದ ನಿವೃತ್ತಿ ಹೊಂದಬೇಕಿತ್ತು.
10 ಕೋಟಿ ಜಾಗದ ವಿಚಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ತುಂಗನಗರದಲ್ಲಿ 25 ಗುಂಟೆ ಜಮೀನು ಹೊಂದಿದ್ದ ನರಸಿಂಹ ಮೂರ್ತಿ, ಕಾಂಗ್ರೆಸ್ ಮುಖಂಡ ಸತೀಶ್ ಎಂಬುವವರು ಜಮೀನು ಖರೀದಿಸೋದಾಗಿ ಅಗ್ರಿಮೆಂಟ್ ಹಾಕಿಸಿಕೊಂಡಿದ್ರು. 10 ಕೋಟಿ ಜಮೀನಿಗೆ 10 ಲಕ್ಷ ಕೊಟ್ಟು ಅಗ್ರಿಮೆಂಟ್ ಹಾಕಲಾಗಿತ್ತು.
ಉಳಿದ ಹಣ ಕೊಡದೆ ಜಮೀನು ಲಪಟಾಯಿಸಿಕೊಂಡ ಆರೋಪವಿದ್ದು, ಹಣ ಕೇಳಲು ಹೋದಾಗ ಕಾಂಗ್ರೆಸ್ ಮುಖಂಡ ಸತೀಶ್ ಧಮ್ಕಿ ಹಾಕಿದ್ದಾರೆ. ಇದರಿಂದ ಮನನೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.