ಸಿಲಿಂಡರ್ ಸ್ಫೋಟ ಪ್ರಕರಣ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು! ಮೃತರ ಸಂಖ್ಯೆ 4ಕ್ಕೇರಿಕೆ

0
Spread the love

ಹುಬ್ಬಳ್ಳಿ: ಸಿಲಿಂಡರ್ ಸೋರಿಕೆ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಲಿಂಗರಾಜ ಬೀರನೂರ(19) ಮೃತ ಅಯ್ಯಪ್ಪ ಮಾಲಾಧಾರಿಯಾಗಿದ್ದು, ಇದೀಗ ಮೃತಪಟ್ಟವರ ಸಂಖ್ಯೆ 4ಕ್ಕೇರಿಕೆ ಆಗಿದೆ. ಬಾಕಿ ಐವರಿಗೆ ಚಿಕಿತ್ಸೆ ಮುಂದುವರೆದಿದೆ.

Advertisement

ಕಳೆದ ಸೋಮವಾರ ಸಾಯಿ ನಗರದ ಉಚ್ಚಮ್ಮಳ ಕಾಲೋನಿಯಲ್ಲಿ ಗ್ಯಾಸ್ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿತ್ತು. ಅಯ್ಯಪ್ಪನ ಸನ್ನಿಧಿಯಲ್ಲಿ ಮಲಗಿದ್ದ 9 ಮಾಲಾಧಾರಿಗಳು ಸುಟ್ಟ ಗಾಯಗಳಿಂದ ಗಂಭೀರಗೊಂಡಿದ್ದರು. ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್​ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಚಿಕಿತ್ಸೆಗೆ ಸ್ಪಂದಿಸದೆ ಇಬ್ಬರು ಗುರುವಾರ ಇಬ್ಬರು, ಇಂದು ಮುಂಜಾನೆ ಒಬ್ಬರು, ಇದೀಗ ಮತ್ತೊಬ್ಬ ಚಿಕಿತ್ಸೆಗೆ ಸ್ಪಂದಿಸದೆ ಇಬ್ಬರು ಸಾವನ್ನಪ್ಪಿದ್ದಾರೆ. ಸಚಿವ ಸಂತೋಷ್ ಲಾಡ್ ಮನವಿ ಹಿನ್ನೆಲೆ ಬೆಂಗಳೂರಿನಿಂದ ವೈದ್ಯರ ತಂಡ ಆಗಮಿಸಿದೆ. ಕಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ಮೃತರ ಕುಟುಂಬಸ್ಥರು ಮತ್ತು ಅಯ್ಯಪ್ಪ ಮಾಲಾಧಿಗಾರಿಗಳು ಕಣ್ಣೀರು ಇಡುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here