ಬೆಂಗಳೂರು: ದಲಿತರನ್ನ ಅಪಮಾನ ಮಾಡೋದು ಕಾಂಗ್ರೆಸ್ ಗುಣ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದಲಿತರ ವಿರೋಧಿ. ವಯನಾಡ್ನಲ್ಲಿ ಪ್ರಿಯಾಂಕ್ ವಾದ್ರಾ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆಯವರನ್ನ ಬಾಗಿಲ ಬಳಿ ನಿಲ್ಲಿಸಿದ್ದರು.
Advertisement
ಮೊನ್ನೆ ಬೆಳಗಾವಿಯಲ್ಲಿ ನಡೆಯೋ ಎಐಸಿಸಿ ಅಧಿವೇಶನಕ್ಕೆ ರಾಹುಲ್ ಗಾಂಧಿ ಬಂದ ಸಮಯದಲ್ಲಿ ಡಿ.ಕೆ ಶಿವಕುಮಾರ್ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನ ತಳ್ಳೋ ಕೆಲಸ ಮಾಡಿದ್ದಾರೆ. ಇದನ್ನು ನೋಡಿದ್ರೆ ಕಾಂಗ್ರೆಸ್ ದಲಿತ ವಿರೋಧಿಗಳು ಎಂದು ಗೊತ್ತಾಗುತ್ತದೆ. ಖರ್ಗೆ ಅವರನ್ನು ಕಾಂಗ್ರೆಸ್ ಸಿಎಂ ಮಾಡಲಿಲ್ಲ. ಯಾಕೆ ಮಾಡಲಿಲ್ಲ? ದಲಿತರನ್ನ ಅಪಮಾನ ಮಾಡೋದು ಕಾಂಗ್ರೆಸ್ ಗುಣ ಎಂದು ಕಿಡಿಕಾರಿದ್ದಾರೆ.