Breaking News: ಠಾಣೆಯಲ್ಲಿಯೇ ಪೊಲೀಸ್ ಸಿಬ್ಬಂದಿಗೆ ವ್ಯಕ್ತಿಯಿಂದ ಹಲ್ಲೆ: ಪ್ರಕರಣ ದಾಖಲು!

0
Spread the love

ಮಂಡ್ಯ:-ಜಿಲ್ಲೆಯ ಪಾಂಡವಪುರದಲ್ಲಿ ಠಾಣೆಗೆ ನುಗ್ಗಿದ ವ್ಯಕ್ತಿಯೋರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಘಟನೆ ಜರುಗಿದೆ.

Advertisement

ಪೊಲೀಸ್ ಸಿಬ್ಬಂದಿಗೆ ಅವಾಜ್ ಹಾಕಿ ಸಾಗರ್ ಎಂಬಾತ ಹಲ್ಲೆ ನಡೆಸಿದ್ದಾನೆ. ಜಮೀನು ವಿವಾದದ ಸಂಬಂಧ ಸಾಗರ್ ವಿರುದ್ಧ ಪಾಂಡವಪುರ ಪೊಲೀಸ್ ಠಾಣೆಗೆ ದೂರು ಬಂದಿತ್ತು. ದೂರಿನ ಹಿನ್ನೆಲೆಯಲ್ಲಿ ಠಾಣೆಗೆ ಸಾಗರನನ್ನು ಪೊಲೀಸರು ಕರೆಸಿದ್ದರು.

ಈ ವೇಳೆ ಪೊಲೀಸ್ ಪೇದೆ ಅಭಿಷೇಕ್ ಹಾಗೂ ಸಾಗರ್ ನಡುವೆ ಮಾತಿನ ಚಕಮಕಿ ಆಗಿದೆ. ಈ ವೇಳೆ ಪೇದೆ ಅಭಿಷೇಕ್ ಸಾಗರ್‌ಗೆ ಒಂದು ಏಟು ಹೊಡೆದಿದ್ದಾರೆ. ನಂತರ ಸಾಗರ್ ಪೇದೆ ಅಭಿಷೇಕ್‌ಗೆ ಅವಾಜ್ ಹಾಕಿ ಹೊಡೆದಿದ್ದಾನೆ. ಹಲ್ಲೆ ನಡೆಸಿದ್ದಲ್ಲದೇ ಪೇದೆ ಕುತ್ತಿಗೆ ಪಟ್ಟಿ ಹಿಡಿದು ಹಲ್ಲೆ ನಡೆಸಿ ಸಾಗರ್‌ ಪರಾರಿಯಾಗಲು ಯತ್ನಿಸಿದ್ದಾನೆ.

ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here