ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಮಾನವೀಯ ಘಟನೆ ನಡೆದಿದೆ. ಹೆಣ್ಣೂರು ರೈಲ್ವೇ ಸ್ಟೇಷನ್ ಬಳಿ ಮಾಲೀಕನೊಬ್ಬ ದ್ವಿಚಕ್ರ ವಾಹನದಲ್ಲಿ ನಾಯಿಯನ್ನು ಎಳೆದೊಯ್ದು ಅಮಾನವೀಯವಾಗಿ ವರ್ತಿಸಿದ್ದಾನೆ.
Advertisement
ಆರಂಭದಲ್ಲಿ ನಾಯಿಯ ಕತ್ತಿಗೆ ಸರಪಳಿ ಹಾಕಿ ದ್ವಿಚಕ್ರ ವಾಹನದಲ್ಲಿ ಕರೆತಂದಿದ್ದಾನೆ. ನಂತರ ರಸ್ತೆಯಲ್ಲಿ ನಾಯಿಯನ್ನ ಓಡಲು ಬಿಟ್ಟು ತಾನು ದ್ವಿಚಕ್ರವನ್ನು ಓಡಿಸಿದ್ದಾನೆ.
ಒಂದು ಕೈಯಲ್ಲಿ ನಾಯಿಯ ಚೈನ್, ಮತ್ತೊಂದು ಕೈಯಲ್ಲಿ ರೈಡಿಂಗ್ ಮಾಡಿ ಹುಚ್ಚಾಟ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಟ್ಟಿದ್ದಾನೆ. ಅಷ್ಟೇ ಅಲ್ಲದೇ ತಲೆಗೆ ಹೆಲ್ಮೆಟ್ ಹಾಕದೇ ಸಂಚಾರ ನಿಯಮವನ್ನು ಉಲ್ಲಂಘಿಸಿದ್ದಾನೆ.
ಕೂಡಲೇ ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಪೊಲೀಸರಿಗೆ ಆಗ್ರಹ ಮಾಡಿದ್ದಾರೆ.