ಬೇಲ್ ಮೇಲೆ ಹೊರ ಬಂದಿರೋ “ಡಿ ಗ್ಯಾಂಗ್” ಗೆ ಸಂಕಷ್ಟ: ಜಾಮೀನು ರದ್ದು ಕೋರಿ ಸುಪ್ರೀಂ ಮೊರೆ ಹೋಗಲು ಖಾಕಿ ರೆಡಿ!

0
Spread the love

ಬೆಂಗಳೂರು:- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿಂದ ಜಾಮೀನು ಪಡೆದು ಹೊರ ಬಂದಿರೋ ಡಿ ಗ್ಯಾಂಗ್ ಗೆ ಮತ್ತೆ ಸಂಕಷ್ಟ ಎದುರಾಗಿದೆ.

Advertisement

ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂ ಮೊರೆ ಹೋಗಲು ಬೆಂಗಳೂರು ಪೊಲೀಸರು, ಗೃಹ ಇಲಾಖೆಗೆ ಅನುಮತಿ ಕೋರಿದೆ. ಇದಕ್ಕೆ ಸರ್ಕಾರ ಒಪ್ಪಿಗೆ ಸೂಚಿಸಿದೆ ಎನ್ನಲಾಗಿದೆ.

ಇನ್ನೂ ಪೊಲೀಸರು ಕಡತಗಳನ್ನು ಗೃಹ ಇಲಾಖೆಗೆ ರವಾನೆ ಮಾಡಿದ್ದಾರೆ. ಈಗಾಗಲೇ ಚಾರ್ಜ್ ಶೀಟ್ ಅನ್ನು ಪೊಲೀಸರು ಕನ್ನಡದಿಂದ ಇಂಗ್ಲಿಷ್​ಗೆ ಭಾಷಾಂತರ ಮಾಡಿಸಿದ್ದಾರೆ. ಈ ಎಲ್ಲಾ ಕಡತಗಳನ್ನು ಗೃಹ ಇಲಾಖೆಗೆ ರವಾನೆ ಮಾಡಿದ್ದಾರೆ. ಎಲ್ಲವೂ ಅಂದುಕೊಂಡಂತೆಯೇ ಆದರೆ ನಾಳೆ ಸುಪ್ರೀಂ ಕೋರ್ಟ್​ಗೆ ಎಸ್​​ಪಿಪಿ ಮೇಲ್ಮನವಿ ಸಲ್ಲಿಸಲಿದ್ದಾರೆ.

ಹೀಗಾಗಿ ಡಿ ಗ್ಯಾಂಗ್ ಗೆ ಸುಪ್ರೀಂ ಸಂಕಷ್ಟ ಎದುರಾಗಿದೆ.


Spread the love

LEAVE A REPLY

Please enter your comment!
Please enter your name here