ವಿಜಯಸಾಕ್ಷಿ ಸುದ್ದಿ, ಗದಗ
ಲಾರಿ ಕಾರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು, ಮೂವರಿಗೆ ಗಾಯಗಳಾಗಿರುವ ಘಟನೆ ತಾಲೂಕಿನ ಹುಲಕೋಟಿ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಪ್ರೇಮ ಈಶ್ವರಗೌಡ ಪಾಟೀಲ್(55) ಹಾಗೂ ಕಾರ್ ಚಾಲಕ ಅನ್ವರ್ ಎಂದು ತಿಳಿದುಬಂದಿದೆ. ಈಶ್ವರಗೌಡ ರುದ್ರಗೌಡ ಪಾಟೀಲ್, ಶಿವಾಬಾಯಿ ಮೇಲಗಿರಿಗೌಡ ಪಾಟೀಲ್, ಮಹಾರಾಜ ಮೇಲಗಿರಿಗೌಡ ಪಾಟೀಲ್ ಎಂದು ಗಾಯಾಳುಗಳಾಗಿದ್ದು , ಇವರಿಗೆ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕೊತ್ಸೆ ನೀಡಲಾಗುತ್ತಿದೆ.
ಮೂಲತಃ ರೋಣ ತಾಲೂಕಿನ ಮಾಳವಾಡ ಗ್ರಾಮದವರಾದ ಇವರು ಹಲವು ವರ್ಷಗಳಿಂದ ಧಾರವಾಡದಲ್ಲಿ ನೆಲೆಸಿದ್ದರು. ಇಂದು ಸ್ವಗ್ರಾಮ ಮಾಳವಾಡದಲ್ಲಿ ತಮ್ಮ ಜಮೀನಿಗೆ ಭೇಟಿ ನೀಡಿ ವಾಪಾಸು ತೆರಳುವಾಗ, ಹುಲಕೋಟಿ ಗ್ರಾಮದ ಬಳಿಯಿರುವ ರೂರಲ್ ಇಂಜಿನಿಯರಿಂಗ್ ಕಾಲೇಜು ಸಮೀಪ ಈ ದುರ್ಘಟನೆ ನಡೆದಿದೆ. ಗದಗ ಗ್ರಾಮೀಣ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Advertisement