ಹುಬ್ಬಳ್ಳಿ:- ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಿಸದೇ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 8ಕ್ಕೆ ಏರಿಕೆ ಆಗಿದೆ.
42 ವರ್ಷದ ಪ್ರಕಾಶ ಬಾರಕೇರ ಮೃತ ವ್ಯಕ್ತಿ. ಅವಘಡದಲ್ಲಿ ಒಂಬತ್ತು ಮಂದಿ ಮಾಲಾಧಾರಿಗಳು ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಎಲ್ಲರ ಸ್ಥಿತಿಯೂ ಚಿಂತಾಜನಕವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸರಣಿಯಂತೆ ಎಂಟು ಮಂದಿ ಕೊನೆಯುಸಿರೆಳೆದಿದ್ದಾರೆ.
25% ಗಾಯಗೊಂಡಿದ್ದ 12 ವರ್ಷ ವಿನಾಯಕ ಬಾರಕೇರ ಎಂಬ ಮಾಲಾಧಾರಿ ಬಾಲಕ ಮಾತ್ರ ಬದುಕಿಳಿದ್ದು, ಇನ್ನು ಎರಡ್ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.
ಘಟನೆ ಹಿನ್ನೆಲೆ:-
ಕಳೆದ ಭಾನುವಾರ ಬೆಳಗ್ಗೆ ಹುಬ್ಬಳ್ಳಿ ಅಚ್ಚವನ ಕಾಲೊನಿಯ ಈಶ್ವರ ದೇವಸ್ಥಾನದಲ್ಲಿ, ಮಾಲಾಧಾರಿಗಳು ಮಲಗಿದ್ದ ವೇಳೆ ಈ ಅವಘಡ ಸಂಭವಿಸಿತ್ತು. ಸಕಾಲದಲ್ಲಿ ಎಲ್ಲಾ ಮಾಲಾಧಾರಿಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಒಬ್ಬೊಬ್ಬರೇ ಸಾವನ್ನಪ್ಪಿದ್ದು, ಓರ್ವ ಬಾಲಕ ಮಾತ್ರ ಬದುಕುಳಿದಿದ್ದಾರೆ.