ಸಚಿನ್ ಸಾವಿನ ಪತ್ರದಲ್ಲಿ ಎಲ್ಲಿಯೂ ನನ್ನ ಹೆಸರನ್ನು ಉಲ್ಲೇಖಿಸಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

0
Spread the love

ಬೆಂಗಳೂರು: ಸಚಿನ್​ ಸಾವಿನ ಪತ್ರದಲ್ಲಿ ಎಲ್ಲಿಯೂ ನನ್ನ ಹೆಸರನ್ನು ಉಲ್ಲೇಖಿಸಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನ್ನ ವಿರುದ್ಧ ಆಪಾದನೆ ಮಾಡುವುದಾದರೆ ಸರಿಯಾದ ದಾಖಲೆಸಮೇತವಾಗಿ ಮಾಡಲಿ.

Advertisement

ಸಚಿನ್​ ಸಾವಿನ ಪತ್ರದಲ್ಲಿ ಎಲ್ಲಿಯೂ ನನ್ನ ಹೆಸರನ್ನು ಉಲ್ಲೇಖಿಸಿಲ್ಲ. ಬಿಜೆಪಿಗರು ಸುಖಾಸುಮ್ಮನೆ ನನ್ನ ಬಗ್ಗೆ ವಾದ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಇನ್ನೂ ಸಿ.ಟಿ.ರವಿ, ಛಲವಾದಿ ನಾರಾಯಣಸ್ವಾಮಿ, ಪಿ.ರಾಜೀವ್ ಸುಳ್ಳು ಆರೋಪ ಮಾಡಿದ್ದಾರೆ. ಅವರೀಗ ಸುಳ್ಳಿನ ಶೂರರಾಗಿದ್ದಾರೆ.‌ ಇವರ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಈ ಹಿಂದೆಯೇ ಹಾಕಿದ್ದೆ. ಅವರು ಹಿಟ್ ಆ್ಯಂಡ್​ ರನ್​ ಹೇಳಿಕೆ ನೀಡುವಲ್ಲಿ ಪಿಎಚ್‌ಡಿ ಪಡೆದಿದ್ದಾರೆ ಎಂದು ಟೀಕೆ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here