ಕಡಪ ಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ! ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

0
Spread the love

ಚಿತ್ರದುರ್ಗ: ಕಡಪ ಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ಮೈಲಹಳ್ಳಿ ಗ್ರಾಮದ ಬಳಿ ನಡೆದಿದೆ.

Advertisement

ರೇಣುಕಾಪುರ ಗ್ರಾಮದ ನಿವಾಸಿ ಶಂಕರನಾಗ್ (38) ಮೃತ ದುರ್ದೈವಿಯಾಗಿದ್ದು, ಟ್ರಾಕ್ಟರ್ ನಲ್ಲಿದ್ದ ಆಂಧ್ರ ಮೂಲದ ಇಬ್ಬರಿಗೆ  ಗಂಭೀರ ಗಾಯಗಳಾಗಿದ್ದು, ಚಳ್ಳಕೆರೆ ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಟ್ರ್ಯಾಕ್ಟರ್ ನಲ್ಲಿ ಕಡಪ ಕಲ್ಲು ತುಂಬಿ ಸಾಗಿಸುತ್ತಿದ್ದಾಗ ಟೈಯರ್ ಬ್ಲಾಸ್ಟ್ ಆಗಿ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ತಳಕು PSI ಲೋಕೇಶ್ ಭೇಟಿ, ಪರಿಶೀಲನೆ ನಡೆಸಿದ್ದು, ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here