ಚಿಕ್ಕಬಳ್ಳಾಪುರ:- ಡಿಕೆ ಶಿವಕುಮಾರ್ ಇನ್ನೂ ಕೆಲವೇ ತಿಂಗಳಲ್ಲಿ ಸಿಎಂ ಆಗುವ ಪರಿಸ್ಥಿತಿ ಇದೆ ಎಂದು ಸಂಸದ ಸುಧಾಕರ್ ಭವಿಷ್ಯ ನುಡಿದಿದ್ದಾರೆ.
Advertisement
ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದ್ದಾರೆ. ಬಿಜೆಪಿಯಲ್ಲಿ ಗುಂಪುಗಾರಿಕೆ ಇದೆ ಅನ್ನುವವರು ಕಾಂಗ್ರೆಸ್ನಲ್ಲಿ ಗುಂಪುಗಾರಿಕೆ ಇಲ್ಲವಾ…? 35 ಮಂದಿ ನ್ಯೂ ಇಯರ್ ಪಾರ್ಟಿ ಡಿನ್ನರ್ ಮೀಟಿಂಗ್ ಮಾಡಿದ್ದಾರೆ. ಅದ್ರಲ್ಲೂ ಡಿಸಿಎಂ ಫಾರಿನ್ ಟೂರಲ್ಲಿ ಇರಬೇಕಾದ್ರೆ ಮಾಡಿದ್ರಲ್ಲ, ಇದು ಗುಂಪುಗಾರಿಕೆ ಅಲ್ಲವಾ..? ಎಂದು ಪ್ರಶ್ನಿಸಿದ್ದಾರೆ.
ಇನ್ನೂ ಡಿಸಿಎಂ ಡಿಕೆ ಶಿವಕುಮಾರ್ 6 ತಿಂಗಳಲ್ಲಿ ಸಿಎಂ ಆಗುವ ಪರಿಸ್ಥಿತಿ ಇದೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು, ಡಿನ್ನರ್ ಮೀಟಿಂಗ್ ಮಾಡಿದ್ದಾರೆ ಎಂದು ಸಂಸದ ಸುಧಾಕರ್ ವ್ಯಂಗ್ಯವಾಡಿದರು.